ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಿಂದ ಬಂದಿರುವ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಳಿಗ್ಗೆ 8.30ರಿಂದ ಆರಂಭವಾದ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗಿದೆ.
ಪ್ರಾಥಮಿಕ ಸುತ್ತಿನಲ್ಲಿ 20 ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದಾರೆ. ಇದರಲ್ಲಿ ಅರ್ಹತೆ ಪಡೆದವರು ಮುಂದಿನ ಸುತ್ತಿಗೆ ಆಯ್ಕೆಯಾಗಲಿದ್ದಾರೆ. ವಿಜೇತ ತಂಡವು ಬೆಂಗಳೂರಿನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಗೆ ಆಯ್ಕೆ ಆಗಲಿದೆ.