<p><strong>ಹುಣಸೂರು:</strong> ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ನಿರ್ಮಿಸಿದ್ದರೂ ಜನರು ಬಳಸಿರುವುದು ವಿಪರ್ಯಾಸದ ಸಂಗತಿ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಮ್ಮ ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಏರ್ಪಡಿಸಿದ್ದ ಶೌಚಾಲಯ ಬಳಕೆ ಮತ್ತು ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರದ ಅನುದಾನದಲ್ಲಿ ಸಾರ್ವಜನಿಕರು ಶೌಚಾಲಯ ನಿರ್ಮಿಸಿ ಕೊಂಡಿದ್ದರೂ ಬಯಲಿಗೆ ಹೋಗುವುದು ತಪ್ಪಿಲ್ಲ. ತಾಲ್ಲೂಕು ಬಯಲು ಶೌಚಮುಕ್ತ ಪ್ರಶಂಸೆಗೆ ಬಾಜನವಾಗಿದ್ದರೂ ಬಳಕೆ ಯಾಗದಿದ್ದರೆ ಶೌಚಾಲಯ ನಿರ್ಮಿಸಿ ಪ್ರಯೋಜನವಾದರೂ ಏನು? ಈ ಬಗ್ಗೆ ಅರಿವು ಮೂಡಿಸಬೇಕಾದ ಅನಿವಾರ್ಯತೆಯ ಹೊಣೆ ಅಧಿಕಾರಿಗಳ ಹೆಗಲ ಮೇಲಿದೆ ಎಂದರು.</p>.<p>ನೀರಿನ ತೊಟ್ಟಿ: ಹಿಂದಿ ಬಾರಿ ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಿಸಲಾಗಿದೆ. ಅವುಗಳು ನಿರ್ವಹಣೆ ಇಲ್ಲದೆ ನೀರು ಕೊಳೆತು ಹುಳು ಕಾಣಿಸುವಂತಾಗಿದೆ. ಸ್ವಚ್ಛತಾ ಕೆಲಸ ಸಾರ್ವಜನಿಕರು ಮಾಡಬೇಕು ಅಥವಾ ಪಂಚಾಯಿತಿ ಮಾಡಬೇಕು ಎಂಬ ಜಿಗ್ಞಾಸೆ ಇದ್ದರೂ ಪಿಡಿಒಗಳು ಜವಾಬ್ದಾರಿ ಹೊತ್ತಲ್ಲಿ ಈ ಬೇಸಿಗೆಯಲ್ಲಿ ಜಾನುವಾರುಗಳಿಗೆ ಸಹಕಾರಿ ಆಗಲಿದೆ ಎಂದರು.</p>.<p>ಇಒ ಕೃಷ್ಣಕುಮಾರ್ ಮಾತನಾಡಿ, ಗ್ರಾಮೀಣ ಶಾಲೆಗಳಲ್ಲಿ ₹ 1.75 ಲಕ್ಷದಲ್ಲಿ ಶೌಚಾಲಯ ನಿರ್ಮಿಸುವ ಅವಕಾಶ ಇದೆ. ಪಿಡಿಒಗಳು ತಲಾ ಎರಡು ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಬೇಕು. ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಪ್ರತಿ ಗ್ರಾಮ ಪಂಚಾಯಿತಿಗೂ ಉದ್ಯೋಗ ಖಾತ್ರಿಯಲ್ಲಿ ₹ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 2 ಸ್ಮಶಾನ ಅಭಿವೃದ್ಧಿಗೆ ಅಧಿಕಾರಿಗಳು ಕ್ರಿಯಾಯೋಜನೆ ಸಿದ್ಧಗೊಳಿಸಬೇಕು. ಇದಕ್ಕೆ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ಬಳಸಿಕೊಳ್ಳುವ ಅವಕಾಶವಿದೆ ಎಂದರು. ಉಪಾಧ್ಯಕ್ಷ ಪ್ರೇಮಕುಮಾರ್ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ನಿರ್ಮಿಸಿದ್ದರೂ ಜನರು ಬಳಸಿರುವುದು ವಿಪರ್ಯಾಸದ ಸಂಗತಿ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಮ್ಮ ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಏರ್ಪಡಿಸಿದ್ದ ಶೌಚಾಲಯ ಬಳಕೆ ಮತ್ತು ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸರ್ಕಾರದ ಅನುದಾನದಲ್ಲಿ ಸಾರ್ವಜನಿಕರು ಶೌಚಾಲಯ ನಿರ್ಮಿಸಿ ಕೊಂಡಿದ್ದರೂ ಬಯಲಿಗೆ ಹೋಗುವುದು ತಪ್ಪಿಲ್ಲ. ತಾಲ್ಲೂಕು ಬಯಲು ಶೌಚಮುಕ್ತ ಪ್ರಶಂಸೆಗೆ ಬಾಜನವಾಗಿದ್ದರೂ ಬಳಕೆ ಯಾಗದಿದ್ದರೆ ಶೌಚಾಲಯ ನಿರ್ಮಿಸಿ ಪ್ರಯೋಜನವಾದರೂ ಏನು? ಈ ಬಗ್ಗೆ ಅರಿವು ಮೂಡಿಸಬೇಕಾದ ಅನಿವಾರ್ಯತೆಯ ಹೊಣೆ ಅಧಿಕಾರಿಗಳ ಹೆಗಲ ಮೇಲಿದೆ ಎಂದರು.</p>.<p>ನೀರಿನ ತೊಟ್ಟಿ: ಹಿಂದಿ ಬಾರಿ ಜಾನುವಾರು ಕುಡಿಯುವ ನೀರಿನ ತೊಟ್ಟಿ ನಿರ್ಮಿಸಲಾಗಿದೆ. ಅವುಗಳು ನಿರ್ವಹಣೆ ಇಲ್ಲದೆ ನೀರು ಕೊಳೆತು ಹುಳು ಕಾಣಿಸುವಂತಾಗಿದೆ. ಸ್ವಚ್ಛತಾ ಕೆಲಸ ಸಾರ್ವಜನಿಕರು ಮಾಡಬೇಕು ಅಥವಾ ಪಂಚಾಯಿತಿ ಮಾಡಬೇಕು ಎಂಬ ಜಿಗ್ಞಾಸೆ ಇದ್ದರೂ ಪಿಡಿಒಗಳು ಜವಾಬ್ದಾರಿ ಹೊತ್ತಲ್ಲಿ ಈ ಬೇಸಿಗೆಯಲ್ಲಿ ಜಾನುವಾರುಗಳಿಗೆ ಸಹಕಾರಿ ಆಗಲಿದೆ ಎಂದರು.</p>.<p>ಇಒ ಕೃಷ್ಣಕುಮಾರ್ ಮಾತನಾಡಿ, ಗ್ರಾಮೀಣ ಶಾಲೆಗಳಲ್ಲಿ ₹ 1.75 ಲಕ್ಷದಲ್ಲಿ ಶೌಚಾಲಯ ನಿರ್ಮಿಸುವ ಅವಕಾಶ ಇದೆ. ಪಿಡಿಒಗಳು ತಲಾ ಎರಡು ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಬೇಕು. ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಪ್ರತಿ ಗ್ರಾಮ ಪಂಚಾಯಿತಿಗೂ ಉದ್ಯೋಗ ಖಾತ್ರಿಯಲ್ಲಿ ₹ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ 2 ಸ್ಮಶಾನ ಅಭಿವೃದ್ಧಿಗೆ ಅಧಿಕಾರಿಗಳು ಕ್ರಿಯಾಯೋಜನೆ ಸಿದ್ಧಗೊಳಿಸಬೇಕು. ಇದಕ್ಕೆ 14ನೇ ಹಣಕಾಸು ಯೋಜನೆಯಲ್ಲಿ ಅನುದಾನ ಬಳಸಿಕೊಳ್ಳುವ ಅವಕಾಶವಿದೆ ಎಂದರು. ಉಪಾಧ್ಯಕ್ಷ ಪ್ರೇಮಕುಮಾರ್ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>