‘ಎಷ್ಟು ಸಾಹಿತಿಗಳ ಚರಿತ್ರೆ, ಕಥೆ– ಕವನ ಅಧ್ಯಯನ ಮಾಡುತ್ತೇವೋ ಅಷ್ಟು ನಮ್ಮಲ್ಲಿನ ಜ್ಞಾನ ಹೆಚ್ಚಾಗುತ್ತ ಹೋಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನ ಕನ್ನಡ ಸಾಹಿತ್ಯ ಪುಸ್ತಕಗಳ ಅಧ್ಯಯನ ಮತ್ತು ಮಹಾನ್ ನಾಯಕರ ಚರಿತ್ರೆ ತಿಳಿದುಕೊಳ್ಳುವ ಚರ್ಚಾ ಕಾರ್ಯಕ್ರಮ ಆಯೋಜಿಸಬೇಕು’ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕ ಜಿ.ಎಸ್.ಗೂಡಲಮನಿ ಮಾತನಾಡಿ, ಚುಟುಕು ಸಾಹಿತ್ಯ ಮತ್ತು ಅದರ ಬೆಳವಣಿಗೆಯ ಕುರಿತು ತಿಳಿಸಿದರು.