<p><strong>ಸಿರುಗುಪ್ಪ:</strong> ಆಂಧ್ರಪ್ರದೇಶ ಮತ್ತು ರಾಜ್ಯದ ಸಂಪರ್ಕ ಕೊಂಡಿ ಎನಿಸಿರುವ ತಾಲ್ಲೂಕಿನ ರಾರಾವಿ ಗ್ರಾಮದ ಬಳಿ ಹಗರಿ ನದಿಗೆ(ವೇದಾವತಿ) ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡು ಐದು ವರ್ಷಗಳೇ ಕಳೆದಿವೆ. ಆದರೆ, ಈ ವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.</p>.<p>2013 ಜನವರಿ 10ರಂದು ಆಗಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ನಿಗದಿಯಂತೆ 2015ಕ್ಕೆ ಸೇತುವೆಯ ಕಾಮಗಾರಿಯು ಸಂಪೂರ್ಣ ಮುಗಿದು, ಅದು ಸಾರ್ವಜನಿಕರ ಬಳಕೆ ಮುಕ್ತವಾಗಬೇಕಿತ್ತು.</p>.<p>ಆದರೆ, ಇಂದಿಗೂ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಲೇ ಇದೆ. ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕಳೆ ಮಟ್ಟದಲ್ಲಿದ್ದು, ಮಳೆಗಾಲದಲ್ಲಿ ಮುಳುಗುತ್ತದೆ. ಅದರಿಂದ ಸಂಪರ್ಕ ಸ್ಥಗಿತಗೊಳ್ಳುತ್ತದೆ. ಕೆಳ ಸೇತುವೆ ಮುಳುಗಿದರೆ, ಜನರು ಆಂಧ್ರದ ಅದೋನಿ ಮತ್ತಿತರ ಪ್ರದೇಶಗಳಿಗೆ ಸುತ್ತಿ ಬಳಸಿ ಹೋಗುವುದು ಅನಿವಾರ್ಯವಾಗಿದೆ.</p>.<p>ಈ ಸೇತುವೆಗೆ ಮುಕ್ತಿ ಯಾವಾಗ ಎಂದು ಹಗರಿ ನದಿ ದಂಡೆಯ ಗ್ರಾಮಸ್ಥರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಹೈದರಾಬಾದಿನ ಮಾಧವನ್ ಹೈಟೆಕ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಈ ಸೇತುವೆ ನಿರ್ಮಾಣದ ಕಾಮಗಾರಿ ಗುತ್ತಿಗೆ ಪಡೆದಿದ್ದು, ₹29.65 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈ ತನಕ ಸೇತುವೆ ನಿರ್ಮಾಣ ಪೂರ್ಣಗೊಂಡಿಲ್ಲ.</p>.<p>‘ಹಗರಿ ನದಿ ರಸ್ತೆ ಸೇತುವೆ ನಿರ್ಮಾಣಕ್ಕಾಗಿ ಎರಡು ದಶಕಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಐದು ವರ್ಷಗಳ ಹೀಂದೆ ಆರಂಭಗೊಂಡ ಕಾಮಗಾರಿ ಕುಂಟುತ್ತಾ<br /> ಸಾಗಿದೆ. ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತೆ ಬೀದಿಗಳಿಯುವ ಮುನ್ನ ಸಂಬಂಧಪಟ್ಟವರು ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂಬುದು ರಾರಾವಿ ಗ್ರಾಮಸ್ಥ ಇ.ಆರ್.ಯಲ್ಲಪ್ಪ ಆಗ್ರಹ. ಈ ಸೇತುವೆ ನಿರ್ಮಾಣ ಯಾವಾಗ ಪೂರ್ಣಗೊಳ್ಳುತ್ತದೆ ಎಂದು ಹಗರಿ ನದಿ ದಂಡೆಯ ಗ್ರಾಮಸ್ಥರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>* *</p>.<p>ಸೇತುವೆ ಕಾಮಗಾರಿ 2015 ಪೂರ್ಣಗೊಳ್ಳಬೇಕಿತ್ತು. ತಾಂತ್ರಿಕ ಕಾರಣದಿಂದ ಈ ಸೇತುವೆ 2018ಕ್ಕೆ ಮುಗಿಸಲು ಗುತ್ತಿಗೆ ದಾರರಿಗೆ ಅವಕಾಶ ಕೊಡಲಾಗಿದೆ <strong>ಹನುಮಂತರಾವ್</strong>, ಎಇಇ, ಲೋಕೋಪಯೋಗಿ ಇಲಾಖೆ, ಸಿರುಗುಪ್ಪ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ:</strong> ಆಂಧ್ರಪ್ರದೇಶ ಮತ್ತು ರಾಜ್ಯದ ಸಂಪರ್ಕ ಕೊಂಡಿ ಎನಿಸಿರುವ ತಾಲ್ಲೂಕಿನ ರಾರಾವಿ ಗ್ರಾಮದ ಬಳಿ ಹಗರಿ ನದಿಗೆ(ವೇದಾವತಿ) ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡು ಐದು ವರ್ಷಗಳೇ ಕಳೆದಿವೆ. ಆದರೆ, ಈ ವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.</p>.<p>2013 ಜನವರಿ 10ರಂದು ಆಗಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ನಿಗದಿಯಂತೆ 2015ಕ್ಕೆ ಸೇತುವೆಯ ಕಾಮಗಾರಿಯು ಸಂಪೂರ್ಣ ಮುಗಿದು, ಅದು ಸಾರ್ವಜನಿಕರ ಬಳಕೆ ಮುಕ್ತವಾಗಬೇಕಿತ್ತು.</p>.<p>ಆದರೆ, ಇಂದಿಗೂ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಲೇ ಇದೆ. ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕಳೆ ಮಟ್ಟದಲ್ಲಿದ್ದು, ಮಳೆಗಾಲದಲ್ಲಿ ಮುಳುಗುತ್ತದೆ. ಅದರಿಂದ ಸಂಪರ್ಕ ಸ್ಥಗಿತಗೊಳ್ಳುತ್ತದೆ. ಕೆಳ ಸೇತುವೆ ಮುಳುಗಿದರೆ, ಜನರು ಆಂಧ್ರದ ಅದೋನಿ ಮತ್ತಿತರ ಪ್ರದೇಶಗಳಿಗೆ ಸುತ್ತಿ ಬಳಸಿ ಹೋಗುವುದು ಅನಿವಾರ್ಯವಾಗಿದೆ.</p>.<p>ಈ ಸೇತುವೆಗೆ ಮುಕ್ತಿ ಯಾವಾಗ ಎಂದು ಹಗರಿ ನದಿ ದಂಡೆಯ ಗ್ರಾಮಸ್ಥರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಹೈದರಾಬಾದಿನ ಮಾಧವನ್ ಹೈಟೆಕ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪನಿ ಈ ಸೇತುವೆ ನಿರ್ಮಾಣದ ಕಾಮಗಾರಿ ಗುತ್ತಿಗೆ ಪಡೆದಿದ್ದು, ₹29.65 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈ ತನಕ ಸೇತುವೆ ನಿರ್ಮಾಣ ಪೂರ್ಣಗೊಂಡಿಲ್ಲ.</p>.<p>‘ಹಗರಿ ನದಿ ರಸ್ತೆ ಸೇತುವೆ ನಿರ್ಮಾಣಕ್ಕಾಗಿ ಎರಡು ದಶಕಗಳಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ಐದು ವರ್ಷಗಳ ಹೀಂದೆ ಆರಂಭಗೊಂಡ ಕಾಮಗಾರಿ ಕುಂಟುತ್ತಾ<br /> ಸಾಗಿದೆ. ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತೆ ಬೀದಿಗಳಿಯುವ ಮುನ್ನ ಸಂಬಂಧಪಟ್ಟವರು ಕಾಮಗಾರಿಯನ್ನು ಪೂರ್ಣಗೊಳಿಸಬೇಕು’ ಎಂಬುದು ರಾರಾವಿ ಗ್ರಾಮಸ್ಥ ಇ.ಆರ್.ಯಲ್ಲಪ್ಪ ಆಗ್ರಹ. ಈ ಸೇತುವೆ ನಿರ್ಮಾಣ ಯಾವಾಗ ಪೂರ್ಣಗೊಳ್ಳುತ್ತದೆ ಎಂದು ಹಗರಿ ನದಿ ದಂಡೆಯ ಗ್ರಾಮಸ್ಥರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>* *</p>.<p>ಸೇತುವೆ ಕಾಮಗಾರಿ 2015 ಪೂರ್ಣಗೊಳ್ಳಬೇಕಿತ್ತು. ತಾಂತ್ರಿಕ ಕಾರಣದಿಂದ ಈ ಸೇತುವೆ 2018ಕ್ಕೆ ಮುಗಿಸಲು ಗುತ್ತಿಗೆ ದಾರರಿಗೆ ಅವಕಾಶ ಕೊಡಲಾಗಿದೆ <strong>ಹನುಮಂತರಾವ್</strong>, ಎಇಇ, ಲೋಕೋಪಯೋಗಿ ಇಲಾಖೆ, ಸಿರುಗುಪ್ಪ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>