ಜಾತ್ರೆಯಲ್ಲಿ ಪಂಕ್ತಿಸೇವೆ ಹೆಸರಿನಲ್ಲಿ ವ್ಯಾಪಕ ಪ್ರಾಣಿ ಬಲಿ ನಡೆಯುತ್ತಿದೆ. ಇದನ್ನು ತಡೆಯಬೇಕು ಎಂದು ಒತ್ತಾಯಿಸಿ 2017ರಲ್ಲಿ ವಿಶ್ವ ಪ್ರಾಣಿ ದಯಾ ಮಂಡಳಿ ಹೈಕೋರ್ಟ್ ಮೊರೆ ಹೋಗಿತ್ತು. ಜಾತ್ರೆಯಲ್ಲಿ ಪ್ರಾಣಿಬಲಿ ತಡೆಗಟ್ಟುವಂತೆ ಹೈಕೋರ್ಟ್ ಜಿಲ್ಲಾಡಳಿತಕ್ಕೆ ಸೂಚಿಸಿತ್ತು. ಅದರಂತೆ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಿದ್ದ ಜಿಲ್ಲಾಡಳಿತ, ಭಕ್ತರು ಕುರಿ, ಮೇಕೆ, ಕೋಳಿಗಳನ್ನು ತರದಂತೆ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿತ್ತು.