ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಬಾಲಾರೋಪಿ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತ

Last Updated 8 ಜನವರಿ 2018, 9:34 IST
ಅಕ್ಷರ ಗಾತ್ರ

ಗುರುಗ್ರಾಮ: ನಗರದ ರಿಯಾನ್‌ ಇಂಟರ್‌ನ್ಯಾಷನಲ್‌ ಶಾಲೆಯ ಏಳು ವರ್ಷದ ಬಾಲಕ ಪ್ರದ್ಯುಮ್ನ ಠಾಕೂರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ 16 ವರ್ಷದ ವಿದ್ಯಾರ್ಥಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ಗುರುಗ್ರಾಮ ನ್ಯಾಯಾಲಯ ತಿರಸ್ಕರಿಸಿದೆ.

ಜಾಮೀನು ಅರ್ಜಿ ಸಂಬಂಧ ಶನಿವಾರ ‘ಸಿಬಿಐ ಮತ್ತು ದೂರುದಾರರ ವಾದ ಕೇಳಿದ ಬಳಿಕ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಜಸ್ಬಿರ್‌ ಸಿಂಗ್‌ ಕುಂದು ಆದೇಶವನ್ನು ಕಾಯ್ದಿರಿಸಿದ್ದರು. ಸೋಮವಾರ ಜಾಮೀನು ಅರ್ಜಿ ತಿರಸ್ಕರಿಸಿದರು.

2016ರ ಸೆ .8ರಂದು ಎಂದಿನಂತೆ ಶಾಲೆಗೆ ತೆರಳಿದ್ದ ಪ್ರದ್ಯುಮ್ನ ಠಾಕೂರ್‌ ಮೃತದೇಹ ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT