<p><strong>ಹಿರಿಯೂರು: </strong>ಮಕ್ಕಳಿಗೆ ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕಲಿಸುವಲ್ಲಿ ಮಠಗಳ ಪಾತ್ರ ಬಹು ದೊಡ್ಡದು ಎಂದು ಕಲಬುರ್ಗಿಯ ಮರುಳ ಶಂಕರಮಠದ ಸಿದ್ದಬಸವ ಕಬೀರಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿರುವ ಮಹಾಶಿವಶರಣ ಹರಳಯ್ಯ ಗುರುಪೀಠದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನದ ಬೆಳಕು ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.</p>.<p>ಶರಣರ ವಚನಗಳು, ದಾಸರ ಕೀರ್ತನೆಗಳು, ತತ್ವಪದಗಳು ಸಾಮಾಜಿಕ ಪರಿವರ್ತನೆಯಲ್ಲಿ ಗಮನಾರ್ಹ ಪಾತ್ರ ವಹಿಸಿವೆ. ಸುಜ್ಞಾನದಿಂದ ಶಿವನ ಧ್ಯಾನ ಮಾಡಿದಾಗ ಮನಸ್ಸು ಪರಿಶುದ್ಧವಾಗುತ್ತದೆ. ಮೇಲು–ಕೀಳು ಭಾವನೆಗಳು ತೊಲಗಬೇಕು. ನ್ಯಾಯೋಚಿತವಾದ ಎಲ್ಲ ವೃತ್ತಿಗಳನ್ನು ಗೌರವಿಸಬೇಕು ಎಂದು ಅವರು ಸೂಚಿಸಿದರು.</p>.<p>ಗುರುಪೀಠದ ಅಧ್ಯಕ್ಷ ಬಸವ ಹರಳಯ್ಯ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಲ್ಲಿರುವ ಮೂಢನಂಬಿಕೆ, ಕಂದಾಚಾರ ಹೋಗಲಾಡಿಸಲು ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಸಕ್ಕರ ರಂಗಸ್ವಾಮಿ ಮಾತನಾಡಿದರು. ಲಲಿತಾ ಕೃಷ್ಣಮೂರ್ತಿ, ಮಹಾಸ್ವಾಮಿ, ಗೊಂದಾಳಪ್ಪ, ಭರಂಪುರ ರಂಗಸ್ವಾಮಿ, ಸಿದ್ದೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ಮಕ್ಕಳಿಗೆ ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕಲಿಸುವಲ್ಲಿ ಮಠಗಳ ಪಾತ್ರ ಬಹು ದೊಡ್ಡದು ಎಂದು ಕಲಬುರ್ಗಿಯ ಮರುಳ ಶಂಕರಮಠದ ಸಿದ್ದಬಸವ ಕಬೀರಸ್ವಾಮಿ ತಿಳಿಸಿದರು.</p>.<p>ತಾಲ್ಲೂಕಿನ ಐಮಂಗಲ ಗ್ರಾಮದಲ್ಲಿರುವ ಮಹಾಶಿವಶರಣ ಹರಳಯ್ಯ ಗುರುಪೀಠದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜ್ಞಾನದ ಬೆಳಕು ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.</p>.<p>ಶರಣರ ವಚನಗಳು, ದಾಸರ ಕೀರ್ತನೆಗಳು, ತತ್ವಪದಗಳು ಸಾಮಾಜಿಕ ಪರಿವರ್ತನೆಯಲ್ಲಿ ಗಮನಾರ್ಹ ಪಾತ್ರ ವಹಿಸಿವೆ. ಸುಜ್ಞಾನದಿಂದ ಶಿವನ ಧ್ಯಾನ ಮಾಡಿದಾಗ ಮನಸ್ಸು ಪರಿಶುದ್ಧವಾಗುತ್ತದೆ. ಮೇಲು–ಕೀಳು ಭಾವನೆಗಳು ತೊಲಗಬೇಕು. ನ್ಯಾಯೋಚಿತವಾದ ಎಲ್ಲ ವೃತ್ತಿಗಳನ್ನು ಗೌರವಿಸಬೇಕು ಎಂದು ಅವರು ಸೂಚಿಸಿದರು.</p>.<p>ಗುರುಪೀಠದ ಅಧ್ಯಕ್ಷ ಬಸವ ಹರಳಯ್ಯ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಲ್ಲಿರುವ ಮೂಢನಂಬಿಕೆ, ಕಂದಾಚಾರ ಹೋಗಲಾಡಿಸಲು ಪ್ರತಿ ತಿಂಗಳು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಸಕ್ಕರ ರಂಗಸ್ವಾಮಿ ಮಾತನಾಡಿದರು. ಲಲಿತಾ ಕೃಷ್ಣಮೂರ್ತಿ, ಮಹಾಸ್ವಾಮಿ, ಗೊಂದಾಳಪ್ಪ, ಭರಂಪುರ ರಂಗಸ್ವಾಮಿ, ಸಿದ್ದೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>