<p><strong>ಶ್ರವಣಬೆಳಗೊಳ: </strong>ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಚಂದ್ರಗಿರಿ ಮತ್ತು ವಿಂಧ್ಯಗಿರಿ ಬೆಟ್ಟಗಳ ದುರಸ್ತಿ ಕಾಮಗಾರಿ ಅಂತಿಮ ಹಂತ ತಲುಪಿವೆ ಎಂದು ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯದ ಬೆಂಗಳೂರು ವಿಭಾಗದ ಅಧೀಕ್ಷಕಿ ಕೆ.ಮೂರ್ತೇಶ್ವರಿ ತಿಳಿಸಿದರು.</p>.<p>ವಿಂಧ್ಯಗಿರಿ ಮತ್ತು ಚಂದ್ರಗಿರಿ ಬೆಟ್ಟಗಳಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಚಂದ್ರಗಿರಿಯಲ್ಲಿ ಈವರೆಗೂ ಅರ್ಧ ಭಾಗಕ್ಕೆ ಮಾತ್ರ ರೈಲಿಂಗ್ಸ್ ಮತ್ತು ಮೆಟ್ಟಿಲುಗಳ ವ್ಯವಸ್ಥೆ ಇತ್ತು. ಉಳಿದ ಅರ್ಧ ಭಾಗದಲ್ಲಿ ಮೆಟ್ಟಿಲುಗಳನ್ನು ಕೆತ್ತುವ ಕೆಲಸ ಬಾಕಿ ಇದ್ದು, ಎರಡೂ ಬದಿ ರೈಲಿಂಗ್ಸ್ ಹಾಕುವ ಕೆಲಸ ಪೂರ್ಣಗೊಂಡಿದೆ ಎಂದು ಹೇಳಿದರು.</p>.<p>ಚಂದ್ರಗಿರಿಯ ಚಿಕ್ಕಬೆಟ್ಟದ ಕೋಟೆಯ ಬಿದ್ದಿರುವ ಭಾಗವನ್ನು ಮಾತ್ರ ದುರಸ್ತಿಗೊಳಿಸಿದ್ದು, ಒಳ ಭಾಗದಲ್ಲಿ ನೆಲಹಾಸು ಕಲ್ಲು ಚಪ್ಪಡಿಗಳನ್ನು ಹಾಕುವ ಕೆಲಸ ನಡೆದಿದೆ. ಸುರಕ್ಷತೆ ದೃಷ್ಠಿಯಿಂದ ಬೇಲಿ ನಿರ್ಮಿಸಲಾಗುವುದು ಎಂದು ಹೇಳಿದರು. ಪುರಾತತ್ವ ಇಲಾಖೆಯ ನಾಗರಾಜ್, ಶ್ರೀಮಠದ ಎಲ್.ಎಸ್.ಜೀವೇಂದ್ರ ಕುಮಾರ್ ಇದ್ದರು.</p>.<p><strong>12 ಕಡೆ ಅಗ್ನಿಶಾಮಕ ವಾಹನ ನಿಯೋಜನೆ</strong></p>.<p>ಮಹಾ ಮಸ್ತಕಾಭಿಷೇಕದ ಅಂಗವಾಗಿ ಪಟ್ಟಣದ 12 ಪ್ರದೇಶಗಳಲ್ಲಿ ಅಗ್ನಿಶಾಮಕ ವಾಹನ ನಿಯೋಜಿಸಲಾಗುವುದು ಎಂದು ಅಗ್ನಿಶಾಮಕ ದಳ ಆಡಳಿತ ಉಪನಿರ್ದೇಶಕ ವರದರಾಜನ್ ಹೇಳಿದರು.</p>.<p>ಮಹೋತ್ಸವ ಹಿನ್ನಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ತಾತ್ಕಾಲಿಕ ಉಪನಗರಗಳಾದ ತ್ಯಾಗಿನಗರ, ಕಳಶನಗರ, ಯಾತ್ರಿನಗರ ಹಾಗೂ ಪಂಚಕಲ್ಯಾಣ ನಗರಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಹೆಲಿಪ್ಯಾಡ್, ಸಭಾಮಂಟಪಗಳು, ಸಾರ್ವಜನಿಕ ಪ್ರದೇಶಗಳು, ಗಣ್ಯರ ವಾಸಸ್ಥಳ ಹಾಗೂ ಜನಸಂಖ್ಯೆ ದಟ್ಟಣೆ ಇರುವ ಸ್ಥಳಗಳನ್ನು ಗುರುತಿಸಿ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಹೋತ್ಸವ ಪೂರ್ಣವಾಗುವ ತನಕ 350 ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ಕೆ.ಆರ್.ಡಿ.ಸಿ.ಎಲ್ ಸಹಾಯಕ ಎಂಜಿನಿಯರ್ ಪ್ರಸನ್ನ ದರ್ಜೆ, ಮೈಸೂರು ವಲಯ ಮುಖ್ಯ ಅಗ್ನಿಶಾಮಕ ಅಧಿಕಾರಿ ವೈ.ಎ.ಕೌಸರ್, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಜಿ.ಈಶ್ವರ್ ನಾಯಕ್, ಹಾಸನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರವಣಬೆಳಗೊಳ: </strong>ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಚಂದ್ರಗಿರಿ ಮತ್ತು ವಿಂಧ್ಯಗಿರಿ ಬೆಟ್ಟಗಳ ದುರಸ್ತಿ ಕಾಮಗಾರಿ ಅಂತಿಮ ಹಂತ ತಲುಪಿವೆ ಎಂದು ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯದ ಬೆಂಗಳೂರು ವಿಭಾಗದ ಅಧೀಕ್ಷಕಿ ಕೆ.ಮೂರ್ತೇಶ್ವರಿ ತಿಳಿಸಿದರು.</p>.<p>ವಿಂಧ್ಯಗಿರಿ ಮತ್ತು ಚಂದ್ರಗಿರಿ ಬೆಟ್ಟಗಳಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಚಂದ್ರಗಿರಿಯಲ್ಲಿ ಈವರೆಗೂ ಅರ್ಧ ಭಾಗಕ್ಕೆ ಮಾತ್ರ ರೈಲಿಂಗ್ಸ್ ಮತ್ತು ಮೆಟ್ಟಿಲುಗಳ ವ್ಯವಸ್ಥೆ ಇತ್ತು. ಉಳಿದ ಅರ್ಧ ಭಾಗದಲ್ಲಿ ಮೆಟ್ಟಿಲುಗಳನ್ನು ಕೆತ್ತುವ ಕೆಲಸ ಬಾಕಿ ಇದ್ದು, ಎರಡೂ ಬದಿ ರೈಲಿಂಗ್ಸ್ ಹಾಕುವ ಕೆಲಸ ಪೂರ್ಣಗೊಂಡಿದೆ ಎಂದು ಹೇಳಿದರು.</p>.<p>ಚಂದ್ರಗಿರಿಯ ಚಿಕ್ಕಬೆಟ್ಟದ ಕೋಟೆಯ ಬಿದ್ದಿರುವ ಭಾಗವನ್ನು ಮಾತ್ರ ದುರಸ್ತಿಗೊಳಿಸಿದ್ದು, ಒಳ ಭಾಗದಲ್ಲಿ ನೆಲಹಾಸು ಕಲ್ಲು ಚಪ್ಪಡಿಗಳನ್ನು ಹಾಕುವ ಕೆಲಸ ನಡೆದಿದೆ. ಸುರಕ್ಷತೆ ದೃಷ್ಠಿಯಿಂದ ಬೇಲಿ ನಿರ್ಮಿಸಲಾಗುವುದು ಎಂದು ಹೇಳಿದರು. ಪುರಾತತ್ವ ಇಲಾಖೆಯ ನಾಗರಾಜ್, ಶ್ರೀಮಠದ ಎಲ್.ಎಸ್.ಜೀವೇಂದ್ರ ಕುಮಾರ್ ಇದ್ದರು.</p>.<p><strong>12 ಕಡೆ ಅಗ್ನಿಶಾಮಕ ವಾಹನ ನಿಯೋಜನೆ</strong></p>.<p>ಮಹಾ ಮಸ್ತಕಾಭಿಷೇಕದ ಅಂಗವಾಗಿ ಪಟ್ಟಣದ 12 ಪ್ರದೇಶಗಳಲ್ಲಿ ಅಗ್ನಿಶಾಮಕ ವಾಹನ ನಿಯೋಜಿಸಲಾಗುವುದು ಎಂದು ಅಗ್ನಿಶಾಮಕ ದಳ ಆಡಳಿತ ಉಪನಿರ್ದೇಶಕ ವರದರಾಜನ್ ಹೇಳಿದರು.</p>.<p>ಮಹೋತ್ಸವ ಹಿನ್ನಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ತಾತ್ಕಾಲಿಕ ಉಪನಗರಗಳಾದ ತ್ಯಾಗಿನಗರ, ಕಳಶನಗರ, ಯಾತ್ರಿನಗರ ಹಾಗೂ ಪಂಚಕಲ್ಯಾಣ ನಗರಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಹೆಲಿಪ್ಯಾಡ್, ಸಭಾಮಂಟಪಗಳು, ಸಾರ್ವಜನಿಕ ಪ್ರದೇಶಗಳು, ಗಣ್ಯರ ವಾಸಸ್ಥಳ ಹಾಗೂ ಜನಸಂಖ್ಯೆ ದಟ್ಟಣೆ ಇರುವ ಸ್ಥಳಗಳನ್ನು ಗುರುತಿಸಿ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ಮಹೋತ್ಸವ ಪೂರ್ಣವಾಗುವ ತನಕ 350 ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. ಕೆ.ಆರ್.ಡಿ.ಸಿ.ಎಲ್ ಸಹಾಯಕ ಎಂಜಿನಿಯರ್ ಪ್ರಸನ್ನ ದರ್ಜೆ, ಮೈಸೂರು ವಲಯ ಮುಖ್ಯ ಅಗ್ನಿಶಾಮಕ ಅಧಿಕಾರಿ ವೈ.ಎ.ಕೌಸರ್, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಜಿ.ಈಶ್ವರ್ ನಾಯಕ್, ಹಾಸನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>