<p><strong>ಭೋಪಾಲ್: </strong>ಪತ್ನಿ ಟಿವಿ ರಿಮೋಟ್ ನೀಡಲು ನಿರಾಕರಿಸಿದ ಕಾರಣ ಇಲ್ಲಿನ ಅಶೋಕ ಗಾರ್ಡನ್ ನಿವಾಸಿ ಶಂಕರ್ ವಿಶ್ವಕರ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಸಣ್ಣ ಹೋಟೆಲ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್, ಸಾವಿಗೂ ಮುನ್ನ ಯಾವುದೇ ಮರಣ ಪತ್ರ ಬರೆದಿಲ್ಲ’ ಎಂದು ತನಿಖಾಧಿಕಾರಿ ಎಎಸ್ಐ ಅಶೋಕ್ ಸಿಂಗ್ ಹೇಳಿದ್ದಾರೆ.</p>.<p>ಮದ್ಯಪಾನ ವ್ಯಸನಿಯಾಗಿದ್ದ ಶಂಕರ್ ಸಣ್ಣಪುಟ್ಟ ವಿಚಾರಗಳನ್ನೂ ದೊಡ್ಡದಾಗಿ ತೆಗೆದುಕೊಳ್ಳುತ್ತಿದ್ದರು ಎಂದು ಆತನ ಕುಟುಂಬದವರು ತನಿಖೆ ವೇಳೆ ತಿಳಿಸಿದ್ದಾರೆ.</p>.<p>‘ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಿದ್ದ ಆತ ಕುಟುಂಬದವರೊಡನೆ ಊಟ ಮಾಡಿ ಬಳಿಕ ಟಿವಿ ನೋಡುತ್ತಿದ್ದ. ಈ ವೇಳೆ ಪತ್ನಿಯನ್ನು ಟಿವಿ ರಿಮೋಟ್ ನೀಡುವಂತೆ ಕೇಳಿದ್ದ. ಆದರೆ, ರಿಮೋಟ್ ನೀಡಲು ನಿರಾಕರಿಸಿದ ಪತ್ನಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಬಳಿಕ ಮತ್ತೊಂದು ಕೊಠಡಿಗೆ ತೆರಳಿದ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತನಿಖೆಯ ನಂತರ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೆಲ ಸಮಯದ ನಂತರ ಹೆಂಡತಿ ಕೊಠಡಿ ಪ್ರವೇಶಿಸಿದಾಗ ಶಂಕರ್ ಸೀಲಿಂಗ್ ಫ್ಯಾನ್ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಅವರು ಕೂಡಲೇ ವಿಷಯವನ್ನು ಕುಟುಂಬ ಸದಸ್ಯರು ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಶೋಕ್ ಸಿಂಗ್ ಹೇಳಿದರು.</p>.<p>ತನಿಖೆ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್: </strong>ಪತ್ನಿ ಟಿವಿ ರಿಮೋಟ್ ನೀಡಲು ನಿರಾಕರಿಸಿದ ಕಾರಣ ಇಲ್ಲಿನ ಅಶೋಕ ಗಾರ್ಡನ್ ನಿವಾಸಿ ಶಂಕರ್ ವಿಶ್ವಕರ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.<p>‘ಸಣ್ಣ ಹೋಟೆಲ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್, ಸಾವಿಗೂ ಮುನ್ನ ಯಾವುದೇ ಮರಣ ಪತ್ರ ಬರೆದಿಲ್ಲ’ ಎಂದು ತನಿಖಾಧಿಕಾರಿ ಎಎಸ್ಐ ಅಶೋಕ್ ಸಿಂಗ್ ಹೇಳಿದ್ದಾರೆ.</p>.<p>ಮದ್ಯಪಾನ ವ್ಯಸನಿಯಾಗಿದ್ದ ಶಂಕರ್ ಸಣ್ಣಪುಟ್ಟ ವಿಚಾರಗಳನ್ನೂ ದೊಡ್ಡದಾಗಿ ತೆಗೆದುಕೊಳ್ಳುತ್ತಿದ್ದರು ಎಂದು ಆತನ ಕುಟುಂಬದವರು ತನಿಖೆ ವೇಳೆ ತಿಳಿಸಿದ್ದಾರೆ.</p>.<p>‘ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಿದ್ದ ಆತ ಕುಟುಂಬದವರೊಡನೆ ಊಟ ಮಾಡಿ ಬಳಿಕ ಟಿವಿ ನೋಡುತ್ತಿದ್ದ. ಈ ವೇಳೆ ಪತ್ನಿಯನ್ನು ಟಿವಿ ರಿಮೋಟ್ ನೀಡುವಂತೆ ಕೇಳಿದ್ದ. ಆದರೆ, ರಿಮೋಟ್ ನೀಡಲು ನಿರಾಕರಿಸಿದ ಪತ್ನಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಬಳಿಕ ಮತ್ತೊಂದು ಕೊಠಡಿಗೆ ತೆರಳಿದ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ತನಿಖೆಯ ನಂತರ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಕೆಲ ಸಮಯದ ನಂತರ ಹೆಂಡತಿ ಕೊಠಡಿ ಪ್ರವೇಶಿಸಿದಾಗ ಶಂಕರ್ ಸೀಲಿಂಗ್ ಫ್ಯಾನ್ಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಅವರು ಕೂಡಲೇ ವಿಷಯವನ್ನು ಕುಟುಂಬ ಸದಸ್ಯರು ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಶೋಕ್ ಸಿಂಗ್ ಹೇಳಿದರು.</p>.<p>ತನಿಖೆ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>