<p><strong>ನವದೆಹಲಿ:</strong> ಹಲವಾರು ಅಡೆ ತಡೆಗಳನ್ನು ಎದುರಿಸಿದ ನಂತರ ಸಂಜಯ್ ಲೀಲಾ ಬನ್ಸಾಲಿ ಅವರ ವಿವಾದಿತ ಚಿತ್ರ <strong>ಪದ್ಮಾವತ್</strong> ಜನವರಿ 25ರಂದು ತೆರೆ ಕಾಣಲಿದೆ ಎಂದು ವಯಾಕಾಮ್18 ಮೋಷನ್ ಪಿಕ್ಚರ್ಸ್ ಮೂಲಗಳು ತಿಳಿಸಿವೆ.</p>.<p>ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಚಿತ್ರದ ಕತೆಯು ರಜಪೂತ ರಾಣಿ ಪದ್ಮಾವತಿ ಹಾಗೂ ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿ ಸುತ್ತ ಸುತ್ತುತ್ತದೆ. ಈ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಒತ್ತಾಯಿಸಿ ಗುಜರಾತ್, ಮಹಾರಾಷ್ಟ್ರ, ಬಿಹಾರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.</p>.<p>ವಿವಾದ ಬಿಸಿ ಏರುತ್ತಿದ್ದಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ– ಸೆನ್ಸಾರ್ ಮಂಡಳಿ)ಡಿ.28ರಂದು ಪರಿಶೀಲನಾ ಸಮಿತಿಯು ಸಭೆ ಸೇರಿತ್ತು. ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವ ಬಗ್ಗೆ ಅಂದು ನಿರ್ಧಾರ ಕೈಗೊಳ್ಳಲಾಗಿತ್ತು. ಇದಕ್ಕೂ ಮೊದಲು, ಬನ್ಸಾಲಿ ಅವರು ಸಂಸದೀಯ ಸಮಿತಿಯ ಮುಂದೆ ಹಾಜರಾಗಿದ್ದರು. 16ನೇ ಶತಮಾನದಲ್ಲಿ ಮಲಿಕ್ ಮೊಹಮ್ಮದ್ ಜಯಸಿ ಅವರು ರಚಿಸಿದ್ದ ‘ಪದ್ಮಾವತ್’ ಮಹಾಕಾವ್ಯ ಆಧರಿಸಿ ಈ ಚಲನಚಿತ್ರವನ್ನು ತಯಾರಿಸಲಾಗಿದೆ ಎಂದು ಹೇಳಿದ್ದರು. ಪರಿಶೀಲನಾ ಸಭೆಯಲ್ಲಿ ಚಿತ್ರದ ಹೆಸರನ್ನು ‘ಪದ್ಮಾವತ್’ ಎಂದು ಬದಲಾಯಿಸುವಂತೆ ಸೆನ್ಸಾರ್ ಮಂಡಳಿಯು ನಿರ್ದೇಶಕರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಲವಾರು ಅಡೆ ತಡೆಗಳನ್ನು ಎದುರಿಸಿದ ನಂತರ ಸಂಜಯ್ ಲೀಲಾ ಬನ್ಸಾಲಿ ಅವರ ವಿವಾದಿತ ಚಿತ್ರ <strong>ಪದ್ಮಾವತ್</strong> ಜನವರಿ 25ರಂದು ತೆರೆ ಕಾಣಲಿದೆ ಎಂದು ವಯಾಕಾಮ್18 ಮೋಷನ್ ಪಿಕ್ಚರ್ಸ್ ಮೂಲಗಳು ತಿಳಿಸಿವೆ.</p>.<p>ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಚಿತ್ರದ ಕತೆಯು ರಜಪೂತ ರಾಣಿ ಪದ್ಮಾವತಿ ಹಾಗೂ ದೆಹಲಿ ಸುಲ್ತಾನ ಅಲ್ಲಾವುದ್ದೀನ್ ಖಿಲ್ಜಿ ಸುತ್ತ ಸುತ್ತುತ್ತದೆ. ಈ ಚಿತ್ರದ ಪ್ರದರ್ಶನವನ್ನು ನಿಷೇಧಿಸುವಂತೆ ಒತ್ತಾಯಿಸಿ ಗುಜರಾತ್, ಮಹಾರಾಷ್ಟ್ರ, ಬಿಹಾರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು.</p>.<p>ವಿವಾದ ಬಿಸಿ ಏರುತ್ತಿದ್ದಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ– ಸೆನ್ಸಾರ್ ಮಂಡಳಿ)ಡಿ.28ರಂದು ಪರಿಶೀಲನಾ ಸಮಿತಿಯು ಸಭೆ ಸೇರಿತ್ತು. ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವ ಬಗ್ಗೆ ಅಂದು ನಿರ್ಧಾರ ಕೈಗೊಳ್ಳಲಾಗಿತ್ತು. ಇದಕ್ಕೂ ಮೊದಲು, ಬನ್ಸಾಲಿ ಅವರು ಸಂಸದೀಯ ಸಮಿತಿಯ ಮುಂದೆ ಹಾಜರಾಗಿದ್ದರು. 16ನೇ ಶತಮಾನದಲ್ಲಿ ಮಲಿಕ್ ಮೊಹಮ್ಮದ್ ಜಯಸಿ ಅವರು ರಚಿಸಿದ್ದ ‘ಪದ್ಮಾವತ್’ ಮಹಾಕಾವ್ಯ ಆಧರಿಸಿ ಈ ಚಲನಚಿತ್ರವನ್ನು ತಯಾರಿಸಲಾಗಿದೆ ಎಂದು ಹೇಳಿದ್ದರು. ಪರಿಶೀಲನಾ ಸಭೆಯಲ್ಲಿ ಚಿತ್ರದ ಹೆಸರನ್ನು ‘ಪದ್ಮಾವತ್’ ಎಂದು ಬದಲಾಯಿಸುವಂತೆ ಸೆನ್ಸಾರ್ ಮಂಡಳಿಯು ನಿರ್ದೇಶಕರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>