ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರತ್ಕಲ್‌: ಹಲ್ಲೆಗೆ ಯತ್ನ

Last Updated 8 ಜನವರಿ 2018, 16:52 IST
ಅಕ್ಷರ ಗಾತ್ರ

ಮಂಗಳೂರು: ನಗರದ ಸುರತ್ಕಲ್‌ ಬಳಿಯ ಅಗರಮೇಲು ಎಂಬಲ್ಲಿ ಸ್ಥಳೀಯ ನಿವಾಸಿ ಭರತ್‌ ಎಂಬ ಯುವಕನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನಿಸಿದೆ.

ಹಿಂದೂ ಜಾಗರಣ ವೇದಿಕೆಯ ಸುರತ್ಕಲ್‌ ಘಟಕದ ಸಹ ಸಂಚಾಲಕ ಭರತ್‌ ಅಗರಮೇಲು ಹಲ್ಲೆಯಿಂದ ತಪ್ಪಿಸಿಕೊಂಡವರು. ರಾತ್ರಿ 8.30ರ ಸುಮಾರಿಗೆ ಮೋಟಾರ್‌ ಬೈಕ್‌ನಲ್ಲಿ ಬರುತ್ತಿದ್ದಾಗ ಅಡ್ಡಗಟ್ಟಿದ ನಾಲ್ವರು ಭರತ್‌ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಿದ್ದಾರೆ.

‘ಪೊದೆಯೊಂದರಲ್ಲಿ ಅಡಗಿ ಕುಳಿತಿದ್ದ ನಾಲ್ವರು ನನ್ನನ್ನು ಅಡ್ಡಗಟ್ಟಿ ತಲವಾರುಗಳಿಂದ ಹಲ್ಲೆ ಮಾಡಲು ಯತ್ನಿಸಿದರು. ಓಡಿ ಪಾರಾಗಿ ಬಂದಿದ್ದೇನೆ’ ಎಂದು ಭರತ್‌ ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT