<p><strong>ಬೆಂಗಳೂರು:</strong> ‘ಸುರತ್ಕಲ್ನಲ್ಲಿ ದೀಪಕ್ ರಾವ್ ಹತ್ಯೆ ಖಂಡಿಸಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ, ರೌಡಿಗಳು ಬೀದಿಗೆ ಬಂದು ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದಂತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗೇಲಿ ಮಾಡಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿದ ಅವರು, ‘ದೀಪಕ್ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ’ ಎಂದು ದೂರಿದರು.</p>.<p>‘ಹಲವು ಹಿಂದೂಗಳ ಹತ್ಯೆ ಹಿಂದೆ ಸಂಘ ಪರಿವಾರದವರೇ ಇದ್ದಾರೆ. ಹರೀಶ್ ಪೂಜಾರಿ ಕೊಲೆ ಸಂಘ ಪರಿವಾರದವರಿಂದ ಆಗಿದೆ. ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಪ್ರಕರಣದಲ್ಲಿ ಬಜರಂಗದಳದ ಕಾರ್ಯಕರ್ತ ಮೊದಲ ಆರೋಪಿ’ ಎಂದರು.</p>.<p>‘ಚುನಾವಣೆಯನ್ನು ವಿಷಯಗಳ ಮೇಲೆ ಎದುರಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೋಮುಗಲಭೆ ಸೃಷ್ಟಿಸಿ ಲಾಭ ಪಡೆಯಲು ಆ ಪಕ್ಷ ಮುಂದಾಗಿದೆ’ ಎಂದೂ ಆರೋಪಿಸಿದರು.</p>.<p>‘ಬಿಜೆಪಿ ನಾಯಕರಂತೆ ಕಾಂಗ್ರೆಸ್ಸಿಗರಿಗೆ ಹಲವು ನಾಲಿಗೆಗಳಿಲ್ಲ. ನಮಗೆ ಒಂದೇ ನಾಲಿಗೆ. ಸುಳ್ಳು ಹೇಳಿಕೊಂಡು ನಾವು ಓಡಾಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸುರತ್ಕಲ್ನಲ್ಲಿ ದೀಪಕ್ ರಾವ್ ಹತ್ಯೆ ಖಂಡಿಸಿ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ, ರೌಡಿಗಳು ಬೀದಿಗೆ ಬಂದು ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದಂತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗೇಲಿ ಮಾಡಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಸೋಮವಾರ ಮಾತನಾಡಿದ ಅವರು, ‘ದೀಪಕ್ ಕೊಲೆ ಪ್ರಕರಣವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ’ ಎಂದು ದೂರಿದರು.</p>.<p>‘ಹಲವು ಹಿಂದೂಗಳ ಹತ್ಯೆ ಹಿಂದೆ ಸಂಘ ಪರಿವಾರದವರೇ ಇದ್ದಾರೆ. ಹರೀಶ್ ಪೂಜಾರಿ ಕೊಲೆ ಸಂಘ ಪರಿವಾರದವರಿಂದ ಆಗಿದೆ. ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಪ್ರಕರಣದಲ್ಲಿ ಬಜರಂಗದಳದ ಕಾರ್ಯಕರ್ತ ಮೊದಲ ಆರೋಪಿ’ ಎಂದರು.</p>.<p>‘ಚುನಾವಣೆಯನ್ನು ವಿಷಯಗಳ ಮೇಲೆ ಎದುರಿಸಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೋಮುಗಲಭೆ ಸೃಷ್ಟಿಸಿ ಲಾಭ ಪಡೆಯಲು ಆ ಪಕ್ಷ ಮುಂದಾಗಿದೆ’ ಎಂದೂ ಆರೋಪಿಸಿದರು.</p>.<p>‘ಬಿಜೆಪಿ ನಾಯಕರಂತೆ ಕಾಂಗ್ರೆಸ್ಸಿಗರಿಗೆ ಹಲವು ನಾಲಿಗೆಗಳಿಲ್ಲ. ನಮಗೆ ಒಂದೇ ನಾಲಿಗೆ. ಸುಳ್ಳು ಹೇಳಿಕೊಂಡು ನಾವು ಓಡಾಡುವುದಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>