ಇಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೊಳಕಾಲ್ಮುರು ಹಾಗೂ ಚಳ್ಳಕೆರೆ ಕ್ಷೇತ್ರಗಳೆರಡೂ ನಾಯಕ ಮೀಸಲು ಕ್ಷೇತ್ರವಾಗಿವೆ. ಈ ಕಾರಣಕ್ಕಾಗಿ ಈ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಕಾಂಕ್ಷಿ ಆಗಿದ್ದೇನೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತನಾಡಿದ್ದು, ಸಾಧನಾ ಸಮಾವೇಶದ ನಂತರ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ’ ಎಂದು ಹೇಳಿದರು.