ನವದೆಹಲಿ: ₹500 ಕೊಟ್ಟರೆ ಆಧಾರ್ ಮಾಹಿತಿಗಳು ದೊರೆಯುತ್ತವೆ ಎಂಬ ವರದಿ ಪ್ರಕಟಿಸಿದ್ದ ‘ದ ಟ್ರಿಬ್ಯೂನ್’ ಪತ್ರಿಕೆಯ ವಿರುದ್ಧ ದೂರು ದಾಖಲಾದ ಬೆನ್ನಿಗೇ, ಪತ್ರಿಕಾ ಸ್ವಾತಂತ್ರ್ಯಕ್ಕೆ ಸರ್ಕಾರ ಬದ್ಧ ಎಂದು ಕೇಂದ್ರದ ಕಾನೂನು ಸಚಿವ ರವಿಶಂಕರ ಪ್ರಸಾದ್ ಹೇಳಿದ್ದಾರೆ. ಆಧಾರ್ ಮಾಹಿತಿ ಸೋರಿಕೆಗೆ ಸಂಬಂಧಿಸಿ ‘ಅಪರಿಚಿತ’ ಸಂಸ್ಥೆಗಳ ವಿರುದ್ಧವಷ್ಟೇ ದೂರು ದಾಖಲಾಗಿದೆ ಎಂದು ಅವರು ಹೇಳಿದ್ದಾರೆ.