‘ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಲೋಕಾಯುಕ್ತರೂ ಆಗಿದ್ದ ವೈ.ಭಾಸ್ಕರ ರಾವ್ ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅವರೊಬ್ಬ ಕ್ರಿಮಿನಲ್ ಆರೋಪಿ. ಇಂತಹ ವ್ಯಕ್ತಿಯ ಭಾವಚಿತ್ರವನ್ನು ಕೋರ್ಟ್ ಹಾಲ್ ಸಂಖ್ಯೆ 1ರಲ್ಲಿ ಇನ್ನೂ ತೂಗುಹಾಕಿರುವುದು ಹೈಕೋರ್ಟ್ ಘನತೆಗೆ ತಕ್ಕುದಲ್ಲ’ ಎಂದು ಅಮೃತೇಶ್ ಮನವಿಯಲ್ಲಿ ವಿವರಿಸಿದ್ದಾರೆ.