<p><strong>ಆನೇಕಲ್:</strong> ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಜ.22ರಿಂದ ನಡೆಯಲಿರುವ ಹುಲಿ ಗಣತಿ ಹಿನ್ನೆಲೆಯಲ್ಲಿ ಗಣತಿದಾರರಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಜಂಗಲ್ ಲಾಡ್ಜ್ನಲ್ಲಿ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.</p>.<p>ಕಾರ್ಯಾಗಾರವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್ ಮೀನಾ ಉದ್ಘಾಟಿಸಿದರು. ಹುಲಿ ಗಣತಿಯನ್ನು ಪಾರದರ್ಶಕವಾಗಿ ಹಾಗೂ ನಿಖರವಾಗಿ ಮಾಡುವ ಸಲುವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು.</p>.<p>ಸಂಪನ್ಮೂಲ ವ್ಯಕ್ತಿಗಳಿಂದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು. ಗಣತಿಯ ಮೊದಲ ದಿನ ಹೆಜ್ಜೆ ಗುರುತು, ವೀಕ್ಷಣೆ, ಗಡಿ ಗುರುತಿಸುವಿಕೆ ಮತ್ತಿತರ ಮಾಹಿತಿಗಳನ್ನು ಕಾರ್ಯಾಗಾರದಲ್ಲಿ ತಿಳಿಸಲಾಯಿತು. ಬನ್ನೇರುಘಟ್ಟ ಮತ್ತು ರಾಮನಗರ ವಿಭಾಗದ 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ 10 ಸ್ವಯಂಸೇವಕರು ಪಾಲ್ಗೊಂಡಿದ್ದರು.</p>.<p>ಉಪಅರಣ್ಯ ಸಂರಕ್ಷಣಾಧಿಕಾರಿ ಜಾವೇದ್ ಮಮ್ತಾಜ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಸುರೇಶ್, ರಾಮಕೃಷ್ಣ ಹಾಜರಿದ್ದರು.</p>.<p><strong>5 ಹುಲಿ ಯೋಜನೆಗಳಲ್ಲೂ ಕಾರ್ಯಾಗಾರ</strong></p>.<p>ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ, ನಾಗರಹೊಳೆ, ಭದ್ರಾ, ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಅಭಯಾರಣ್ಯ, ದಾಂಡೇಲಿ ಕಾಳಿ ವನ್ಯಜೀವಿ ಅಭಯಾರಣ್ಯಗಳಲ್ಲೂ ಹುಲಿ ಗಣತಿ ತರಬೇತಿ ಕಾರ್ಯಾಗಾರ ನಡೆಯಿತು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್ ಮೀನಾ ತಿಳಿಸಿದರು.</p>.<p>ಕುದುರೆಮುಖ ರಾಷ್ಟ್ರೀಯ ಉದ್ಯಾನ, ಪುಷ್ಪಗಿರಿ, ಬ್ರಹ್ಮಗಿರಿ ಹಾಗೂ ತಲಕಾವೇರಿ ವನ್ಯಧಾಮಗಳಲ್ಲೂ ಕಾರ್ಯಾಗಾರ ನಡೆದಿದೆ. 418 ಗಸ್ತು ಪ್ರದೇಶ ಒಳಗೊಂಡಂತೆ 251 ಸ್ವಯಂ ಸೇವಕರು ಹಾಗೂ 1,003 ಸಿಬ್ಬಂದಿಗೆ ತರಬೇತಿ ನೀಡಲಾಯಿತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಜ.22ರಿಂದ ನಡೆಯಲಿರುವ ಹುಲಿ ಗಣತಿ ಹಿನ್ನೆಲೆಯಲ್ಲಿ ಗಣತಿದಾರರಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಜಂಗಲ್ ಲಾಡ್ಜ್ನಲ್ಲಿ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.</p>.<p>ಕಾರ್ಯಾಗಾರವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್ ಮೀನಾ ಉದ್ಘಾಟಿಸಿದರು. ಹುಲಿ ಗಣತಿಯನ್ನು ಪಾರದರ್ಶಕವಾಗಿ ಹಾಗೂ ನಿಖರವಾಗಿ ಮಾಡುವ ಸಲುವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು.</p>.<p>ಸಂಪನ್ಮೂಲ ವ್ಯಕ್ತಿಗಳಿಂದ ಪ್ರಾತ್ಯಕ್ಷಿಕೆಯನ್ನು ಆಯೋಜಿಸಲಾಗಿತ್ತು. ಗಣತಿಯ ಮೊದಲ ದಿನ ಹೆಜ್ಜೆ ಗುರುತು, ವೀಕ್ಷಣೆ, ಗಡಿ ಗುರುತಿಸುವಿಕೆ ಮತ್ತಿತರ ಮಾಹಿತಿಗಳನ್ನು ಕಾರ್ಯಾಗಾರದಲ್ಲಿ ತಿಳಿಸಲಾಯಿತು. ಬನ್ನೇರುಘಟ್ಟ ಮತ್ತು ರಾಮನಗರ ವಿಭಾಗದ 100 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ 10 ಸ್ವಯಂಸೇವಕರು ಪಾಲ್ಗೊಂಡಿದ್ದರು.</p>.<p>ಉಪಅರಣ್ಯ ಸಂರಕ್ಷಣಾಧಿಕಾರಿ ಜಾವೇದ್ ಮಮ್ತಾಜ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಸುರೇಶ್, ರಾಮಕೃಷ್ಣ ಹಾಜರಿದ್ದರು.</p>.<p><strong>5 ಹುಲಿ ಯೋಜನೆಗಳಲ್ಲೂ ಕಾರ್ಯಾಗಾರ</strong></p>.<p>ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ, ನಾಗರಹೊಳೆ, ಭದ್ರಾ, ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಅಭಯಾರಣ್ಯ, ದಾಂಡೇಲಿ ಕಾಳಿ ವನ್ಯಜೀವಿ ಅಭಯಾರಣ್ಯಗಳಲ್ಲೂ ಹುಲಿ ಗಣತಿ ತರಬೇತಿ ಕಾರ್ಯಾಗಾರ ನಡೆಯಿತು ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ಕುಮಾರ್ ಮೀನಾ ತಿಳಿಸಿದರು.</p>.<p>ಕುದುರೆಮುಖ ರಾಷ್ಟ್ರೀಯ ಉದ್ಯಾನ, ಪುಷ್ಪಗಿರಿ, ಬ್ರಹ್ಮಗಿರಿ ಹಾಗೂ ತಲಕಾವೇರಿ ವನ್ಯಧಾಮಗಳಲ್ಲೂ ಕಾರ್ಯಾಗಾರ ನಡೆದಿದೆ. 418 ಗಸ್ತು ಪ್ರದೇಶ ಒಳಗೊಂಡಂತೆ 251 ಸ್ವಯಂ ಸೇವಕರು ಹಾಗೂ 1,003 ಸಿಬ್ಬಂದಿಗೆ ತರಬೇತಿ ನೀಡಲಾಯಿತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>