ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತು ಹೆಚ್ಚಿಸಲು ರಾಜ್ಯಗಳಿಗೆ ಉತ್ತೇಜನ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಆಲೋಚನೆ
Last Updated 8 ಜನವರಿ 2018, 19:32 IST
ಅಕ್ಷರ ಗಾತ್ರ

ನವದೆಹಲಿ: ರಫ್ತು ಉತ್ತೇಜನಕ್ಕೆ ಹೆಚ್ಚು ಆಸಕ್ತಿ ತೋರುವ ರಾಜ್ಯಗಳಿಗೆ ಉತ್ತೇಜನಾ ಕೊಡುಗೆ ನೀಡುವುದನ್ನು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ.

‘ದೇಶಿ ರಫ್ತು ಹೆಚ್ಚಳಗೊಳ್ಳುವುದರಿಂದ ಆರ್ಥಿಕತೆಗೂ  ಉತ್ತೇಜನ ಸಿಗಲಿದೆ. ಈ ಸಂಬಂಧ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಲಾಗಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಹೇಳಿದ್ದಾರೆ. ಇತ್ತೀಚೆಗೆ ನಡೆದಿದ್ದ ವ್ಯಾಪಾರ ಅಭಿವೃದ್ಧಿ ಮತ್ತು ಉತ್ತೇಜನಾ ಮಂಡಳಿಯ ಸಭೆಯಲ್ಲಿ ಈ ವಿಷಯ ಪ್ರಮುಖವಾಗಿ ಪ್ರಸ್ತಾವಗೊಂಡಿತ್ತು.

‘ರಫ್ತು ಉತ್ತೇಜಿಸಲು ರಾಜ್ಯ ಸರ್ಕಾರಗಳಿಗೆ ಯಾವ ಬಗೆಯಲ್ಲಿ ಉತ್ತೇಜನ ನೀಡಬೇಕು ಎನ್ನುವುದರ ಬಗ್ಗೆ ವಾಣಿಜ್ಯ ಸಚಿವಾಲಯ ಚಿಂತಿಸುತ್ತಿದೆ. ನಾನು ಈ ಸಲಹೆಯನ್ನು ರಾಜ್ಯಗಳ ಗಮನಕ್ಕೆ ತಂದಿರುವೆ. ರಾಜ್ಯಗಳ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಹೆಚ್ಚಳಗೊಂಡರೆ ಅದು ದೇಶದ ಆರ್ಥಿಕ ಬೆಳವಣಿಗೆಗೂ ನೆರವು ನೀಡಲಿದೆ. ಒಟ್ಟಾರೆ ರಫ್ತು ವಹಿವಾಟು ಉತ್ತೇಜಿಸಿ, ಕೈಗಾರಿಕಾ ಬೆಳವಣಿಗೆ ವೃದ್ಧಿಸಲು ವಾಣಿಜ್ಯ ಸಚಿವಾಲಯ ಕಾರ್ಯತಂತ್ರ ರೂಪಿಸುತ್ತಿದೆ’ ಎಂದು ಹೇಳಿದ್ದಾರೆ.
*
ಮರುಪಾವತಿಗೆ ‘ಇ–ವಾಲೆಟ್‌’ ಪರಿಹಾರ
‘ಜಿಎಸ್‌ಟಿ ಮರುಪಾವತಿ ಕುರಿತು ರಫ್ತುದಾರರು ವ್ಯಕ್ತಪಡಿಸಿರುವ ಕಳವಳಕ್ಕೆ ಪ್ರತಿಕ್ರಿಯಿಸಿರುವ ಅವರು, ಈ ಸಮಸ್ಯೆಗೆ ‘ಇ–ವಾಲೆಟ್‌’ ವ್ಯವಸ್ಥೆ ಮೂಲಕ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. ಏಪ್ರಿಲ್‌ – ನವೆಂಬರ್‌ ಅವಧಿಯಲ್ಲಿ ದೇಶದ ರಫ್ತು ವಹಿವಾಟು ಶೇ 12 ರಷ್ಟು ಹೆಚ್ಳಳಗೊಂಡು ₹ 12.77 ಲಕ್ಷ ಕೋಟಿಗಳಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT