<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ರೂಪಿಸಿರುವ ‘ಪರಿಷ್ಕೃತ ಮಹಾ ಯೋಜನೆ (ಆರ್ಎಂಪಿ)–2031’ ರೈತರ ಜಮೀನುಗಳನ್ನು ಕಬಳಿಸಿ, ಬಿಲ್ಡರ್ಸ್ಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಪಾದಿಸಿದರು.</p>.<p>1006 ಚದರ ಕಿ.ಮೀ ವ್ಯಾಪ್ತಿಯನ್ನು ಮೂರು ವಲಯಗಳನ್ನಾಗಿ ಬಿಡಿಎ ವಿಂಗಡಣೆ ಮಾಡಿರುವುದು ದೊಡ್ಡ ಗೋಲ್ಮಾಲ್ಗೆ ಕಾರಣವಾಗಲಿದೆ. ಆರ್ಎಂಪಿ ಹಿಂದೆ ಹಣ ಗಳಿಕೆಯ ಉದ್ದೇಶವಿದೆ ವಿನಾ ಜನಪರ ಕಾಳಜಿಯಿಲ್ಲ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಟೀಕಿಸಿದರು.</p>.<p>ವಲಯ ವಿಂಗಡಣೆ ಅವೈಜ್ಞಾನಿಕವಾಗಿರುವುದರಿಂದ ಕೃಷಿ ವಲಯ ಗಣನೀಯ ಪ್ರಮಾಣದಲ್ಲಿ ಕುಸಿಯಲಿದೆ. ಖಾಸಗಿ ಜಮೀನಿನಲ್ಲಿ ಸಾರ್ವಜನಿಕ, ಅರೆ ಸಾರ್ವಜನಿಕ ಎಂದು ವರ್ಗೀಕರಣ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ.</p>.<p>ಬನ್ನೇರು ಘಟ್ಟ ರಸ್ತೆಯಲ್ಲಿ ಕೃಷಿ ಮತ್ತು ಅರಣ್ಯ ಜಮೀನು ಹೆಚ್ಚಾಗಿದೆ. ಅದರ ಮಧ್ಯಭಾಗದಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲು ಪ್ರಭಾವಿ ವ್ಯಕ್ತಿಗಳಿಗೆ ಅವಕಾಶ ನೀಡಿರುವುದು ಅನುಮಾನ ಮೂಡಿಸಿದೆ ಎಂದು ಹೇಳಿದರು.</p>.<p>ಆರ್ಎಂಪಿ ರೂಪಿಸುವ ಮೊದಲು ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಬೇಕಾಗಿತ್ತು. ಅವೈಜ್ಞಾನಿಕ ಹಾಗೂ ಜನ ವಿರೋಧಿಯಾಗಿರುವ ಆರ್ಎಂಪಿಯನ್ನು ಸಮಗ್ರವಾಗಿ ಮರು ಪರಿಶೀಲಿಸಬೇಕು, ಅಹವಾಲು ಸಲ್ಲಿಸಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ರೂಪಿಸಿರುವ ‘ಪರಿಷ್ಕೃತ ಮಹಾ ಯೋಜನೆ (ಆರ್ಎಂಪಿ)–2031’ ರೈತರ ಜಮೀನುಗಳನ್ನು ಕಬಳಿಸಿ, ಬಿಲ್ಡರ್ಸ್ಗಳಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಪಾದಿಸಿದರು.</p>.<p>1006 ಚದರ ಕಿ.ಮೀ ವ್ಯಾಪ್ತಿಯನ್ನು ಮೂರು ವಲಯಗಳನ್ನಾಗಿ ಬಿಡಿಎ ವಿಂಗಡಣೆ ಮಾಡಿರುವುದು ದೊಡ್ಡ ಗೋಲ್ಮಾಲ್ಗೆ ಕಾರಣವಾಗಲಿದೆ. ಆರ್ಎಂಪಿ ಹಿಂದೆ ಹಣ ಗಳಿಕೆಯ ಉದ್ದೇಶವಿದೆ ವಿನಾ ಜನಪರ ಕಾಳಜಿಯಿಲ್ಲ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಟೀಕಿಸಿದರು.</p>.<p>ವಲಯ ವಿಂಗಡಣೆ ಅವೈಜ್ಞಾನಿಕವಾಗಿರುವುದರಿಂದ ಕೃಷಿ ವಲಯ ಗಣನೀಯ ಪ್ರಮಾಣದಲ್ಲಿ ಕುಸಿಯಲಿದೆ. ಖಾಸಗಿ ಜಮೀನಿನಲ್ಲಿ ಸಾರ್ವಜನಿಕ, ಅರೆ ಸಾರ್ವಜನಿಕ ಎಂದು ವರ್ಗೀಕರಣ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ.</p>.<p>ಬನ್ನೇರು ಘಟ್ಟ ರಸ್ತೆಯಲ್ಲಿ ಕೃಷಿ ಮತ್ತು ಅರಣ್ಯ ಜಮೀನು ಹೆಚ್ಚಾಗಿದೆ. ಅದರ ಮಧ್ಯಭಾಗದಲ್ಲಿ ವಾಣಿಜ್ಯ ಚಟುವಟಿಕೆ ನಡೆಸಲು ಪ್ರಭಾವಿ ವ್ಯಕ್ತಿಗಳಿಗೆ ಅವಕಾಶ ನೀಡಿರುವುದು ಅನುಮಾನ ಮೂಡಿಸಿದೆ ಎಂದು ಹೇಳಿದರು.</p>.<p>ಆರ್ಎಂಪಿ ರೂಪಿಸುವ ಮೊದಲು ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಬೇಕಾಗಿತ್ತು. ಅವೈಜ್ಞಾನಿಕ ಹಾಗೂ ಜನ ವಿರೋಧಿಯಾಗಿರುವ ಆರ್ಎಂಪಿಯನ್ನು ಸಮಗ್ರವಾಗಿ ಮರು ಪರಿಶೀಲಿಸಬೇಕು, ಅಹವಾಲು ಸಲ್ಲಿಸಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>