‘ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಫಾರೂಕ್ ಅವರೇ ಕುಮಾರಸ್ವಾಮಿ ಮೂಲಕ ಈ ಹೇಳಿಕೆ ಕೊಡುವಂತೆ ಪ್ರೇರೇಪಿಸಿರಬಹುದು. ಇದು ತನಿಖೆಯ ದಿಕ್ಕು ತಪ್ಪಿಸುವ ಷಡ್ಯಂತ್ರವಾಗಿದೆ. ಆದ್ದರಿಂದ ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿ ಶಾಸಕರನ್ನು ಮತ್ತು ಹೇಳಿಕೆ ನೀಡಿದ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಬೇಕು. ಇಂತಹ ಹೇಳಿಕೆಗಳ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿರುವುದು ಸರಿಯಲ್ಲ’ ಎಂದರು. ಪಾಲಿಕೆ ಸದಸ್ಯರಾದ ತಿಲಕ್ ರಾಜ್, ವಿರೋಧ ಪಕ್ಷದ ನಾಯಕ ಗಣೇಶ್ ಹೊಸಬೆಟ್ಟು, ಬಿಜೆಪಿ ಮುಖಂಡರಾದ ವಿಕಾಸ್ ಪುತ್ತೂರು, ಕಿಶೋರ್ ರೈ ಇದ್ದರು.