ಮುಂದಿನ ಆರು ತಿಂಗಳಲ್ಲಿ ಪಕ್ಷಕ್ಕೆ ಹೊಸ ಕಳೆ ಬರುವಂತೆ ಮಾಡುವುದಾಗಿಯೂ ಸಂಘಟನೆಯಲ್ಲಿ ಬದಲಾವಣೆ ಮಾಡುವುದಾಗಿಯೂ ರಾಹುಲ್ ಭರವಸೆ ನೀಡಿದರು. ಅಲ್ಲದೆ, ಭಾರತ ಎದುರಿಸುತ್ತಿರುವ ಗಂಭೀರ ಸಮಸ್ಯೆಯ ಪರಿಹಾರಕ್ಕೆ ನೆರವಾಗುವಂತೆ ಅನಿವಾಸಿ ಭಾರತೀಯರಿಗೆ ಕರೆ ನೀಡಿದರು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.