ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್‌ ಅನುಮತಿ ನಿರಾಕರಣೆ ಹೊರತಾಗಿಯೂ ಜಿಗ್ನೇಶ್ ರ‍್ಯಾಲಿ?

Last Updated 9 ಜನವರಿ 2018, 9:37 IST
ಅಕ್ಷರ ಗಾತ್ರ

ನವದೆಹಲಿ: ಪೊಲೀಸರ ಅನುಮತಿ ನಿರಾಕರಣೆಯ ಹೊರತಾಗಿಯೂ ಇಲ್ಲಿನ ಪಾರ್ಲಿಮೆಂಟ್‌ ಸ್ಟ್ರೀಟ್‌ನಲ್ಲಿ ರ‍್ಯಾಲಿ ನಡೆಸಲು ಗುಜರಾತ್‌ನ ವಡ್‌ಗಾಮ್ ಕ್ಷೇತ್ರದ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಮುಂದಾಗಿದ್ದಾರೆ.

ದಲಿತ ಸಂಘಟನೆ ಭೀಮ್ ಆರ್ಮಿಯ ಸಂಸ್ಥಾಪಕರ ಬಿಡುಗಡೆಯ ಬೇಡಿಕೆ, ಶೈಕ್ಷಣಿಕ, ಉದ್ಯೋಗ, ಜೀವಿಸುವ ಹಕ್ಕು ಮತ್ತು ಲಿಂಗ ಅಸಮಾನತೆಯ ವಿರುದ್ಧ ಜಿಗ್ನೇಶ್ ಮೇವಾನಿ ನೇತೃತ್ವದಲ್ಲಿ ‘ಯುವ ಹೂಂಕಾರ್ ರ‍್ಯಾಲಿ’ ಹಮ್ಮಿಕೊಳ್ಳಲಾಗಿದೆ. ಮೇವಾನಿ ಮತ್ತು ಅಸ್ಸಾಂನ ಕೃಷಿಕಾರ್ಮಿಕರ ಸಂಘಟನೆಯ ನಾಯಕ ಅಖಿಲ್ ಗೊಗೊಯ್ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಮಧ್ಯೆ, ‘ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಆದೇಶದಂತೆ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿ ಯಾವುದೇ ರ‍್ಯಾಲಿಗೆ ಅವಕಾಶ ನೀಡುವುದಿಲ್ಲ. ಬೇರೆ ಪ್ರದೇಶವನ್ನು ಆರಿಸುವಂತೆ ಸಂಘಟಕರಿಗೆ ಸೂಚಿಸಲಾಗಿದೆ’ ಎಂದು ದೆಹಲಿಯ ಪೊಲೀಸ್ ಉಪ ಆಯುಕ್ತರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT