ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಬದಲಾವಣೆಯ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

Last Updated 9 ಜನವರಿ 2018, 6:36 IST
ಅಕ್ಷರ ಗಾತ್ರ

ಮಡಿಕೇರಿ: ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕ್ರಿಸ್ಟಲ್ ಹಾಲ್‌ನಲ್ಲಿ ನಡೆಯುವ ಸಾಧನಾ ಸಮಾವೇಶದಲ್ಲಿ ಭಾಗಿಯಾಗುವ ಸಲುವಾಗಿ ಅವರು ನಗರಕ್ಕೆ ಆಗಮಿಸಿದರು.

ಕೊಡಗಿನ ಕಾವೇರಿ ಹಾಗೂ ಪೊನ್ನಂಪೇಟೆ ತಾಲ್ಲೂಕು ರಚನೆ ಬಗ್ಗೆ ಬೇಡಿಕೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕೋಮಭಾವನೆಗೆ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಂಗಳೂರಿನ ಕಾಟಿಪಳ್ಳದ ದೀಪಕ್ ರಾವ್ ಕೊಲೆ ಪ್ರಕರಣ ಸಂಬಂಧ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದರು.

ಚುನಾವಣೆ ಪೂರ್ವ ಹಾಗೂ ಚುನಾವಣೆ ಬಳಿಕ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಸಾಧನಾ ಸಮಾವೇಶದ ಬಳಿಕ ಮಧ್ಯಾಹ್ನ 3.30ಕ್ಕೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT