ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ‘ಶಿಕ್ಷಣ, ಉದ್ಯೋಗ ಒಳಗೊಂಡಂತೆ ಎಲ್ಲ ಕ್ಷೇತ್ರಗಳಲ್ಲಿ ದಲಿತರ ಏಳಿಗೆ ಹೊಂದುತ್ತಿದ್ದಾರೆ. ಅದನ್ನು ಸಹಿಸದ ಕೆಟ್ಟ ಮನಸ್ಥಿತಿಯವರು ಕೋರೆಗಾಂವ್ ವಿಜಯೋತ್ಸವ ಆಚರಣೆ ವೇಳೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ಪ್ರತಿಭಟನಕಾರರು ದೂಷಿಸಿದರು.