ರಾಷ್ಟ್ರಗೀತೆ ಕಡ್ಡಾಯ ವಿಷಯಕ್ಕೆ ಸಂಬಂದಿಸಿ ವಿಧಿ, ವಿಧಾನ ರೂಪಿಸಲು 12 ಸದಸ್ಯರನ್ನೊಳಗೊಂಡ ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ ಎಂದು ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಹಿಂದಿನ ಆದೇಶವನ್ನು ಪರಿಷ್ಕರಿಸಿತು.