ಪಶುಪಾಲನಾ ಇಲಾಖೆಯಿಂದ ರಾಸುಗಳಿಗೆ ಜಾತ್ರಾ ಆವರಣದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆ ಸೇರಿದಂತೆ ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ವಿವಿಧ ತಾಲ್ಲೂಕುಗಳಿಂದ ರೈತರು ಎತ್ತುಗಳನ್ನು ಮಾರಾಟ ಮಾಡಲು ಜಾತ್ರೆಗೆ ಬಂದಿದ್ದಾರೆ. ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ರೈತರು ರಾಸುಗಳನ್ನು ಕೊಳ್ಳಲು ಬಂದಿದ್ದಾರೆ.