ಈ ವೇಳೆ ಹತ್ತಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದ ನಿಯಂತ್ರಣಾ ಕೊಠಡಿ, ಹೋಟೆಲ್, ಅಂಗಡಿಗಳ ಮೇಲೆ ಹಾಗೂ ತರಕಾರಿ ಮಾರಲೆಂದು ಬಂದವರ ಮೇಲೂ ಕಲ್ಲು ತೂರಿದ ಪ್ರತಿಭಟನಾಕಾರರು, ಅವರು ತಂದಿದ್ದ ತರಕಾರಿಯನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಕಾರವಾರ ರಸ್ತೆಯಲ್ಲಿನ ಬೀದಿದೀಪಗಳನ್ನು ಒಡೆದು ಹಾಕಿದರು. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿದರು. ಚನ್ನಮ್ಮ ವೃತ್ತ, ಗೋಕುಲ ರಸ್ತೆಯಲ್ಲಿ ಓಡಾಡುತ್ತಿದ್ದ 50ಕ್ಕೂ ಹೆಚ್ಚು ವಾಹನಗಳನ್ನು ತಡೆದು ಚಕ್ರದ ಗಾಳಿಯನ್ನು ತೆಗೆದರು. ಕೆಲ ವಾಹನ ಸವಾರರು ಇದನ್ನು ಪ್ರಶ್ನಿಸಲಾಗಿ, ಮಾತಿನ ಚಕಮಕಿಯೂ ನಡೆಯಿತು.