ಕೊಡಗು ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳ ಆಯ್ಕೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ. ಬೆಂಬಲಿಗರಿಗೆ ಯಾವುದೇ ಸ್ಥಾನ ನೀಡಿಲ್ಲ, ಸಲಹೆ ಪಡೆಯುತ್ತಿಲ್ಲವೆಂದು ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದರು. ಜತೆಗೆ ಮಾಜಿ ಸಚಿವ, ಮಡಿಕೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಬಿ.ಎ.ಜೀವಿಜಯ ಹಾಗೂ ನಾಣಯ್ಯ ನಡುವೆ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು. ಕೆಲವು ದಿನಗಳಿಂದ ಇಬ್ಬರೂ ವೇದಿಕೆ ಹಂಚಿಕೊಂಡಿರಲಿಲ್ಲ.