ರ್ಯಾಲಿ ರದ್ದಾಗಿರುವುದಕ್ಕೆ ದೆಹಲಿಯಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ. ಸದ್ಯದ ಪರಿಸ್ಥಿತಿಯ ಬಗ್ಗೆ ದೆಹಲಿ ಪೊಲೀಸ್ ಜಂಟಿ ಆಯುಕ್ತ ಅಜಯ್ ಚೌಧರಿ ಪ್ರತಿಕ್ರಿಯೆ ನೀಡಿದ್ದು, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ) ನಿರ್ದೇಶನದ ಮೇರೆಗೆ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿದೆ ಎಂದಿದ್ದಾರೆ. ಬೇರೆ ಪ್ರದೇಶದಲ್ಲಿ ರ್ಯಾಲಿ ಆಯೋಜಿಸುವಂತೆ ಸಂಘಟಕರಿಗೆ ಸೂಚಿಸಲಾಗಿತ್ತು ಎಂದು ಹಿರಿಯ ಪೊಲೀಸರೊಬ್ಬರು ತಿಳಿಸಿದ್ದಾರೆ.