ಹೌದು, ಯಾವುದೇ ಕಪಟತನಗಳಿಲ್ಲದ ಜನಸಾಮಾನ್ಯರು ಇರುವುದೇ ಹೀಗೆ; ಬದುಕುವುದೇ ಹೀಗೆ ಎಂಬುದನ್ನು ಇದು ಎತ್ತಿತೋರಿಸಿದೆ. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಸ್ನೇಹ, ಸೌಹಾರ್ದಗಳು ನಮ್ಮ ಜನಸಾಮಾನ್ಯರಲ್ಲಿ ರಕ್ತಗತವಾಗಿರುತ್ತವೆ ಎಂಬುದನ್ನು ಹಾಗೂ ಈ ಹೊತ್ತಿನಲ್ಲಿ ಇದು ಅನಿವಾರ್ಯವೆಂಬುದನ್ನು ಈ ಸಂಗತಿ ರುಜುವಾತುಪಡಿಸಿದ್ದು, ಎಲ್ಲರ ಕಣ್ತೆರೆಸುವಂತಿದೆ.