ಭಾನುವಾರ ರಾತ್ರಿ 10.30ರ ವೇಳೆಗೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕಾರೊಂದು ಪಾದಚಾರಿ ಮಿಥುನ್ ಎಂಬವರಿಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ಬಡಾ ಗ್ರಾಮ ಪಂಚಾಯ್ತಿ ಸದಸ್ಯ ದೀವ್ ರಫೀಕ್ ಎಂಬುವರು ಕೂಡಲೇ ಅವರ ಕಾರಿನಲ್ಲಿ ಸ್ನೇಹಿತರ ಜತೆಗೆ ಕರೆದುಕೊಂಡು ಹೋಗಿ ಉಡುಪಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಿಥುನ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಎಂದು ಉಚ್ಚಿಲದ ಮುಸ್ಲಿಂ ಯುವಕರು ಸಾಮಾಜಿಕ ಜಾಲ ತಾಣಗಳಲ್ಲಿ ಮನವಿ ಮಾಡುತ್ತಿದ್ದಾರೆ.