‘ಚಲನಚಿತ್ರ ಪ್ರಮಾಣೀಕರಣ ಮಂಡಳಿಯ ನಡೆಯಿಂದ ನಮಗೆಲ್ಲಾ ಸಮಾಧಾನವಾಗಿದೆ. ಚಿತ್ರದಲ್ಲಿ ಮಾಡಿರುವ ಬದಲಾವಣೆಯಿಂದ ನಮಗೆ ತೃಪ್ತಿಯಾಗಿಲ್ಲ. ನಮಗೆ ತೃಪ್ತಿಯಾಗುವವರೆಗೂ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಇದೇ 25ರಂದು ಚಿತ್ರ ಬಿಡುಗಡೆಗೆ ಮಂಡಳಿ ಅವಕಾಶ ಮಾಡಿಕೊಟ್ಟರೆ ಇಡೀ ಭಾರತ ಹೊತ್ತಿ ಉರಿಯಲಿದೆ’ ಎಂದು ಕರ್ಣಿ ಸೇನಾ ಬೆದರಿಕೆ ಹಾಕಿದೆ.