ಶಾಸಕ ಜಿ.ಹಂಪಯ್ಯ ನಾಯಕ ಮಾತನಾಡಿ, ‘ಕಾಲೇಜಿನ ಅಭಿವೃದ್ಧಿಗಾಗಿ ₹1.70 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ’ ಎಂದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಇಲಿಯಾಸ್ ಖಾದ್ರಿ, ಜಿಲ್ಲಾ ಪಂಚಾಯತಿ ಸದಸ್ಯ ಕಿರಿಲಿಂಗಪ್ಪ, ಕಾಲೇಜಿನ ಪಂಶುಪಾಲ ಯಂಕಣ್ಣ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಪಿ.ತಿಪ್ಪಣ್ಣ ಬಾಗಲವಾಡ ವಕೀಲ, ಈರಮ್ಮ, ಫಕೀರಪ್ಪ ಓಲೇಕಾರ ಹಾಗೂ ಉಪನ್ಯಾಸಕರು ಇದ್ದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 49 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು.