ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣ, ಸೆಂಟ್ರಿಂಗ್, ಪೇಂಟಿಂಗ್ ಮುಂತಾದ ಕೆಲಸ ಮಾಡಿಸುವ ನೂರಾರು ಮಂದಿ ಗುತ್ತಿಗೆದಾರರು ಇದ್ದಾರೆ. ನಿಯಮದಂತೆ ಗುತ್ತಿಗೆದಾರರು ತಮ್ಮಲ್ಲಿ ಕೆಲಸ ಮಾಡುವ ಕಾರ್ಮಿಕರ ಪಟ್ಟಿಯನ್ನು ಕಾರ್ಮಿಕ ಇಲಾಖೆಗೆ ನೀಡಿ ನೋಂದಣಿ ಮಾಡಿಸಬೇಕು. ಅವಘಡಗಳು ಸಂಭವಿಸಿ ಕಾರ್ಮಿಕರು ಮೃತಪಟ್ಟರೆ ಇಲಾಖೆಯಿಂದ ₹2 ಲಕ್ಷ ಪರಿಹಾರ ಸಿಗುತ್ತದೆ ಎಂದು ಹೇಳಿದರು.