ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾರಂಗಕ್ಕೆ ಪಲಿಮಾರು ಸ್ವಾಮೀಜಿ ಭೇಟಿ

Last Updated 10 ಜನವರಿ 2018, 5:47 IST
ಅಕ್ಷರ ಗಾತ್ರ

ಉಡುಪಿ: ಭಾವಿ ಪರ್ಯಾಯ ಪೀಠಾಧಿಪತಿ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಅವರು ಯಕ್ಷಗಾನ ಕಲಾರಂಗದ ಕಚೇರಿಗೆ ಸೋಮವಾರ ಭೇಟಿ ನೀಡಿದರು. ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಕ್ಷಗಾನ ಕಲೆಯ ಮಹತ್ವದ ಬಗ್ಗೆ ಅವರು ಮಾತನಾಡಿದರು. ಪರ್ಯಾಯದ ಅವಧಿಯಲ್ಲಿ ಎಲ್ಲ ರೀತಿಯ ನೆರವು ನೀಡಲಾಗುವುದು. ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳು ಇನ್ನಷ್ಟು ಹೆಚ್ಚಾಗಲಿ ಎಂದು ಹಾರೈಸಿದರು.

ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಮಾತನಾಡಿ, ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಮಠಾಧೀಶರ ಪ್ರೋತ್ಸಾಹವೂ ಸಂಸ್ಥೆಯ ಬೆಳವಣಿಗೆಗೆ ಪ್ರಮುಖ ಕಾರಣ ಎಂದರು. ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಅವರು ವಿವರ ನೀಡಿದರು.

ಸಂಸ್ಥೆಯ ಅಧ್ಯಕ್ಷ ಕೆ. ಗಣೇಶ ರಾವ್, ಉಪಾಧ್ಯಕ್ಷರಾದ ಎಸ್.ವಿ. ಭಟ್, ಎಂ. ಗಂಗಾಧರ ರಾವ್ ಸ್ವಾಮಿಜಿ ಅವರಿಗೆ ಫಲಸಮರ್ಪಣೆ ಮಾಡಿ ಆಶೀರ್ವಾದ ಯಾಚಿಸಿದರು. ಮಠದ ಪ್ರಹ್ಲಾದ ಆಚಾರ್ಯ, ರಘುವೀರ ಬಲ್ಲಾಳ್, ಶ್ರಿಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಅವರು ಸ್ವಾಮೀಜಿ ಅವರಿಗೆ ಪಾದಪೂಜೆ ಮಾಡಿದರು. ನಾಣ್ಯ ತುಲಾಭಾರವೂ ಸಂಪನ್ನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT