ಬಂಧಿತ ಆರೋಪಿಗಳಾದ ಪಿ.ಕೆ.ಶ್ರೀಜಿತ್, ಧನುಷ್ ಪೂಜಾರಿ, ಕಿಶನ್ ಪೂಜಾರಿ ಮತ್ತು ಸಂದೇಶ್ ಕೋಟ್ಯಾನ್ ಅವರನ್ನು ಸ್ಥಳಕ್ಕೆ ಕರೆದೊಯ್ದಿರುವ ಸಿಸಿಆರ್ಬಿ ಎಸಿಪಿ ವೆಲೆಂಟೈನ್ ಡಿಸೋಜ ನೇತೃತ್ವದ ತನಿಖಾ ತಂಡ ನದಿಯಲ್ಲಿ ಶೋಧ ನಡೆಸುತ್ತಿದೆ. ಮುಳುಗು ತಜ್ಞರು ನದಿಯಲ್ಲಿ ತಲವಾರುಗಳಿಗಾಗಿ ಹುಡುಕಾಡುತ್ತಿದ್ದಾರೆ.