ಈ ಮಹಿಳೆಯರ ನರಳಾಟ ಕೇಳಿ ಸ್ಥಳೀಯರು ನೆರವಿಗೆ ಧಾವಿಸಿದ್ದು, ಮಣ್ಣನ್ನು ತೆಗೆಯಲು ಶ್ರಮ ಪಟ್ಟರು. ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಅರ್ಧ ಗಂಟೆಗೂ ಹೆಚ್ಚು ಹೊತ್ತಿನ ಬಳಿಕ ಅವರನ್ನು ಹೊರೆತೆಗೆಯಲಾಯಿತು. ಅಷ್ಟರಲ್ಲಿ ಆಗಲೇ ಕೆಂಪಮ್ಮ ಮೃತಪಟ್ಟಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಬಿಡದಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.