'ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿ ಬಿದ್ದಿದೆ. ಅನಿಲ ಸೋರಿಕೆಯಾಗುತ್ತಿದ್ದು, ಅದನ್ನು ನಿಲ್ಲಿಸಲು ಕಾರ್ಯಾಚರಣೆ ನಡೆಯುತ್ತಿದೆ. ಟ್ಯಾಂಕರ್ ಸ್ಥಳಾಂತರ ಮಾಡುವವರೆಗೂ ಈ ಮಾರ್ಗದ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಗುವುದು' ಎಂದು ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.