ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದ್ದು, ಧನ್ಯಶ್ರೀ ತಂದೆ ಯಾದವ ಸುವರ್ಣ ಅವರಿಗೆ ಕೆಲವರು ಒತ್ತಡ ಹೇರಿ ಪೊಲೀಸರಿಗೆ ತಪ್ಪು ಮಾಹಿತಿ ನೀಡುವಂತೆ ಮಾಡಿರುವುದು ಗೊತ್ತಾಗಿದೆ.
‘ತಪ್ಪು ಮಾಹಿತಿ ನೀಡುವಂತೆ ಮಾಡಿದ ಕೆಲ ಸಂಘಟನೆಗಳ ಯುವಕರನ್ನು ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಸುಳ್ಳು ಮಾಹಿತಿ ಕೊಡಿಸಿ, ತನಿಖೆ ದಾರಿ ತಪ್ಪಿಸಲು ಯತ್ನಿಸಿದ್ದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಲಭ್ಯವಾಗಿವೆ. ಸಂಘಟನೆಗಳ ಯುವಕರ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು’ ಎಂದರು.