ಈ ಆದೇಶದ ಪರಿಶೀಲನೆಗೆ ಕೋರಿ ಎನ್ಜಿಟಿಗೆ ಮನವಿ ಸಲ್ಲಿಸಲಾಗಿತ್ತು. ಆ ಮನವಿಯನ್ನು ವಜಾಗೊಳಿಸಿದ ನಂತರ ಮೇಲ್ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದ ಸರ್ಕಾರದ ಪರ ವಕೀಲ ಬಸವಪ್ರಭು ಪಾಟೀಲ, ಎನ್ಜಿಟಿಯ ಆದೇಶವು ಕಾನೂನಿಗೆ ವಿರುದ್ಧವಾದುದಾಗಿದೆ. ಅಲ್ಲದೆ, ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಈ ಆದೇಶವನ್ನು ಪಾಲಿಸುವುದು ಪ್ರಾಯೋಗಿಕವಾಗಿ ಕಷ್ಟಸಾಧ್ಯ ಎಂದು ಹೇಳಿದರು.