ತಿರುವನಂತಪುರದಲ್ಲಿರುವ ‘ವಿಕ್ರಮ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಶಿವನ್ ಅವರು ಎ.ಎಸ್.ಕಿರಣ್ ಕುಮಾರ್ ಅವರ ಜಾಗಕ್ಕೆ ನೇಮಕವಾಗಿದ್ದಾರೆ. ಇವರು ಮುಂಬರುವ ಮೂರು ವರ್ಷಗಳ ಅವಧಿಗೆ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಹಾಗೂ ಬಾಹ್ಯಾಕಾಶ ಆಯೋಗದ ಅಧ್ಯಕ್ಷರೂ ಆಗಿರುತ್ತಾರೆ’ ಎಂದು ಸಿಬ್ಬಂದಿ ಸಚಿವಾಲಯ ಹೇಳಿದೆ.