ತಾವು ದೆಹಲಿಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ (ಪಿ.ಚಿದಂಬರಂ ಅವರು ಆರೋಪಿಯಾಗಿದ್ದ) 2ಜಿ ತರಂಗಾಂತರ ಹಂಚಿಕೆ ಪ್ರಕರಣದ ವಿಚಾರಣೆಯನ್ನು ನಡೆಸಿದ್ದರಿಂದ ಈ ಪ್ರಕರಣದ ವಿಚಾರಣೆಯನ್ನು ನಡೆಸುವುದು ಸರಿಯಲ್ಲ ಎಂದು ನ್ಯಾ.ಶರ್ಮ ಹೇಳಿದರು. ಜಾರಿ ನಿರ್ದೇಶನಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಇದೇ ರೀತಿಯ ಇನ್ನೊಂದು ಪ್ರಕರಣ ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಇದ್ದು, ಈ ಪ್ರಕರಣದ ವಿಚಾರಣೆಯನ್ನೂ ಅದೇ ಪೀಠ ನಡೆಸಲಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು.