ವಿಚಾರಣೆ ವೇಳೆ ಅರ್ಜಿದಾರರ ವಕೀಲ ಅರ್ಜುನ್ ವಾದಿಸಿ, ‘ರಾಮಚಂದರ್ 2017ರ ಸೆ.14ರಂದು ರಾಜಕಾಲುವೆ ಮೇಲೆ ಕೇವಲ ಮೂರು ತಿಂಗಳಲ್ಲಿ ಮೂರು ಮಹಡಿ ಕಟ್ಟಡ ನಿರ್ಮಿಸಿದ್ದಾರೆ. ಕಟ್ಟಡದ ಸುತ್ತಲೂ ಸೆಟ್ಬ್ಯಾಕ್ ಬಿಟ್ಟಿಲ್ಲ ಹಾಗೂ ನಿರ್ಮಾಣಕ್ಕೆ ಬಿಬಿಎಂಪಿ ನಕ್ಷೆಯ ಮಂಜೂರಾತಿ ಪಡೆದಿಲ್ಲ. ಇದರಿಂದ ಸುತ್ತಲಿನ ನಿವಾಸಿಗಳಿಗೆ ತೊಂದರೆಯಾಗಿದೆ. ಬಿಬಿಎಂಪಿ ಅಧಿಕಾರಿಗಳೂ ಈತನಕ ಸ್ಥಳ ಪರಿಶೀಲನೆ ನಡೆಸಿಲ್ಲ’ ಎಂದು ದೂರಿದರು.