ಜ. 8ರಂದು ನಸುಕಿನಲ್ಲಿ ಬಾರ್ನಲ್ಲಿ ಬೆಂಕಿ ಅವಘಡ ಸಂಭವಿಸಿ, ಐವರು ಕೆಲಸಗಾರರು ಮೃತಪಟ್ಟಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಎದುರು ಬಾರ್ನ ‘ಕಿಂಡಿ’ ವ್ಯವಹಾರದ ಬಗ್ಗೆ ಸ್ಥಳೀಯರು ದೂರಿದ್ದರು. ಹೀಗಾಗಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು, ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಅವರಿಗೆ ಸೂಚಿಸಿದ್ದರು.