ಕಾಮಗಾರಿಯ ವಿನ್ಯಾಸ ರೂಪಿಸಿ, ಅದರ ಮೌಲ್ಯಮಾಪನ ನಡೆಸಿ ಅನುದಾನ ಬಿಡುಗಡೆ ಮಾಡಲಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನು ಇದರ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಕಾಮಗಾರಿಗಳ ಸಮಗ್ರ ಯೋಜನಾ ವರದಿ ಸಿದ್ಧವಾಗಿದೆ. ಆದರೆ, ಅದಕ್ಕೆ ಎಸ್ಪಿವಿಯ ಮೊದಲ ಸಭೆಯ ಬಳಿಕವಷ್ಟೇ ಮಂಜೂರಾತಿ ಸಿಗಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ತಿಳಿಸಿದರು.