ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಲ್ಮೆಟ್‌ ಧರಿಸಿ ಜೀವ ಉಳಿಸಿಕೊಳ್ಳಿ

Last Updated 11 ಜನವರಿ 2018, 5:30 IST
ಅಕ್ಷರ ಗಾತ್ರ

ಗುಡಿಬಂಡೆ: 'ದ್ವಿಚಕ್ರ ವಾಹನ ಸವಾರರು ಗುಣಮಟ್ಟದ ಹೆಲ್ಮೆಟ್ ಧರಿಸಿ ಜೀವ ರಕ್ಷಿಸಿಕೊಳ್ಳಬೇಕು ಎಂದು ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಧೀಶ ಎಂ.ವಿನೋದ್ ಕುಮಾರ್ ತಿಳಿಸಿದರು.

'ಹೆಲ್ಮೆಟ್ ಕುರಿತು ಕಾನೂನು ಅರಿವು' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 'ದ್ವಿಚಕ್ರ ವಾಹನ ಸವಾರರ ಜೀವ ಅವರ ಕೈಯಲ್ಲಿಯೇ ಇದೆ. ಅಪಘಾತ ಸಂಭವಿಸಿದಾಗ ಹೆಲ್ಮೆಟ್ ಇದ್ದರೆ ಜೀವಾಪಾಯ ತಪ್ಪಿಸಬಹುದು. ಈ ಕುರಿತು ನ್ಯಾಯಾಲಯವೂ ಸೂಚನೆ ನೀಡಿದೆ ಎಂದರು.

ಸಹಾಯಕ ಸರ್ಕಾರಿ ವಕೀಲ ಸತೀಶ್ ಮಾತನಾಡಿ, 'ಪ್ರತಿಯೊಬ್ಬರೂ ಕಾನೂನು ಪಾಲನೆ ಮಾಡಬೇಕು ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಟಿ.ಸಿ. ಅಶ್ವತ್ಥರೆಡ್ಡಿ, ಉಪಾಧ್ಯಕ್ಷ ಎಸ್.ವಿ. ನಂದೀಶ್ವರರೆಡ್ಡಿ, ಕಾರ್ಯದರ್ಶಿ ಎ. ಗಂಗಾಧರಪ್ಪ, ವಕೀಲರಾದ ನಾರಾ ಯಣಸ್ವಾಮಿ, ಪಿ.ಶಿವಪ್ಪ, ಜಿ.ಎಂ. ಅನಿಲ್ ಕುಮಾರ್, ಗೋವಿಂದಪ್ಪ, ಗಂಗರಾಜು, ಆಡಳಿತ ಸಹಾಯಕ ಎನ್.ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT