‘ಮಂಡ್ಯ ಡಿಸಿಸಿ ಅಧ್ಯಕ್ಷರಾಗಿ ಸಿ.ಡಿ. ಗಂಗಾಧರ ಅವರನ್ನು ನೇಮಕ ಮಾಡಿರುವುದಕ್ಕೆ ಶಾಸಕರಾದ ಅಂಬರೀಷ್ ಹಾಗೂ ಪಿ.ಎಂ. ನರೇಂದ್ರ ಸ್ವಾಮಿ ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಪಕ್ಷದ ಜಿಲ್ಲಾ ಘಟಕದಲ್ಲಿ ಗೊಂದಲ ಹುಟ್ಟುಹಾಕಿದೆ. ಗೊಂದಲ ಪರಿಹರಿಸುವ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥನ್ಗೆ ವಹಿಸಲಾಗಿತ್ತು.