ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಧಮಾನ ಪ್ರಶಸ್ತಿಗೆ ಆಹ್ವಾನ

Last Updated 11 ಜನವರಿ 2018, 19:30 IST
ಅಕ್ಷರ ಗಾತ್ರ

ಮೂಡುಬಿದಿರೆ: ಇಲ್ಲಿನ ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠವು ಈ ಬಾರಿಯ ಪ್ರಶಸ್ತಿಗೆ 2012ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾದ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪರಿಶೀಲನೆಗೆ ಆಹ್ವಾನಿಸಿದೆ.

37 ವರ್ಷಗಳಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ವರ್ಧಮಾನ ಸಾಹಿತ್ಯ ಪ್ರಶಸ್ತಿಯು ಹಿರಿಯ ಸಾಹಿತಿಗಳ ಕೃತಿಗೆ ಮೀಸಲಾಗಿದ್ದು, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ತಮ್ಮ ಮೊದಲನೆಯ, ಎರಡನೆಯ ಇಲ್ಲವೆ ಮೂರನೆಯ ಕೃತಿಯ ಮೂಲಕ ಮಹತ್ವದನ್ನು ಸಾಧಿಸಿದ ಹೊಸ ಪೀಳಿಗೆಯ ಸಾಹಿತಿಗಳಿಗೆ ನೀಡಲಾಗುವುದು.

ಆಸಕ್ತರು ಕೃತಿಯ ಮೂರು ಪ್ರತಿಗಳನ್ನು ಮುನಿರಾಜ ರೆಂಜಾಳ, ಸಹ ನಿರ್ದೇಶಕರು, ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠ, ಜೈನ್ ಹೈಸ್ಕೂಲು, ಮೂಡುಬಿದಿರೆ -574227(ದ.ಕ) 9449936232 ಇವರಿಗೆ ಮಾರ್ಚ್ 15ರ ಮುಂಚಿತ ಕಳಿಸಿಕೊಡುವಂತೆ ಪೀಠದ ಪ್ರಧಾನ ನಿರ್ದೇಶಕ ಡಾ.ನಾ ಮೊಗಸಾಲೆ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT