ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಸೆಮಿಫೈನಲ್ ಪಂದ್ಯದ ಬಾಲಕರ ವಿಭಾಗದಲ್ಲಿ ಉತ್ತರ ಪ್ರದೇಶ 25-22, 25-18, 25-13 ಪಾಯಿಂಟ್ಗಳ ಅಂತರದಿಂದ ಹರಿಯಾಣ ತಂಡವನ್ನು ಸೋಲಿಸಿತು. ಸತ್ಯದೇವ ಸಿಂಗ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಬಾಲಕರ ವಿಭಾಗದ ಇನ್ನೊಂದು ಸೆಮಿಫೈನಲ್ನಲ್ಲಿ ತೆಲಂಗಾಣ 25–19, 25–23, 25–19ರಲ್ಲಿ ವಿದ್ಯಾಭಾರತಿ ತಂಡವನ್ನು ಸೋಲಿಸಿತು.