‘ಈಚಿನ ವರ್ಷಗಳಲ್ಲಿ ಸರಿಯಾಗಿ ಮಳೆ ಬಾರದೆ ಕೆರೆ– ಕಟ್ಟೆ, ಕಲ್ಯಾಣಿ, ಬಾವಿಗಳಲ್ಲಿ ಹೂಳು, ಕಸ ತುಂಬುತ್ತಿದೆ. ಹೂಳು ಮತ್ತು ಕಸ ತೆಗೆದು ಇವುಗಳನ್ನು ಸ್ವಚ್ಛಗೊಳಿಸುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿ ಅಂತರ್ಜಲ ವೃದ್ಧಿಸುತ್ತದೆ. ಮಳೆ ನೀರಿನ ಇಂಗು ಗುಂಡಿಗಳನ್ನು ನಿರ್ಮಿಸಿ ಕೊಳವೆಬಾವಿಗಳನ್ನು ಮರುಪೂರಣಗೊಳಿಸುವುದು ಅತ್ಯವಶ್ಯ. ಜತೆಗೆ ನೀರಿನ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಬೇಕಿದೆ. ಈ ಕಾರ್ಯ ಯಶಸ್ವಿಯಾಗಬೇಕಾದರೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಂಘಟನೆಗಳನ್ನು ರಚಿಸಬೇಕು’ ಎಂದು ಪತ್ರದಲ್ಲಿ ಹೇಳಿದ್ದಾರೆ.