‘ಮೇಯರ್ ಆರ್.ಸಂಪತ್ ರಾಜ್ ಅವರು ಚೀನಾ, ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಅವರು ದೆಹಲಿ ಹಾಗೂ ಜಂಟಿ ಆಯುಕ್ತ (ಘನತ್ಯಾಜ್ಯ ನಿರ್ವಹಣೆ) ಸರ್ಫರಾಜ್ ಖಾನ್ ಅವರು ಹಜ್ಗೆ ಹೋಗಿದ್ದಾರೆ. ಅವರು ಇಲ್ಲದಿದ್ದಾಗ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ. ಹೀಗಾಗಿ, ಎಂದಿನಂತೆ ಕಸದ ವಿಲೇವಾರಿಯಲ್ಲಿ ತೊಡಗುತ್ತೇವೆ. ಮೂವರು ರಾಜಧಾನಿಗೆ ವಾಪಸ್ ಬಂದ ಬಳಿಕ, ಅವರೊಂದಿಗೆ ಚರ್ಚಿಸುತ್ತೇವೆ. ನಮ್ಮ ಬೇಡಿಕೆಗಳಿಗೆ ಸ್ಪಂದಿಸದ್ದರೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಂಘದ ಅಧ್ಯಕ್ಷ ಸಿ.ನಾಗರಾಜು ‘ಪ್ರಜಾವಾಣಿ’ಗೆ ತಿಳಿಸಿದರು.